ಮಂಗಳೂರು: ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದ ಪ್ರಯುಕ್ತ ಮಂಗಳೂರಿನ KSRTC ಬಸ್ ನಿಲ್ದಾಣದಲ್ಲಿ ಜಿಲ್ಲಾ ಬಸ್ ಗಳಿಗೆ ಪೂಜಾ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಐವನ್ ಡಿʼಸೋಜಾ ಬಸ್ನಲ್ಲಿ ಸ್ವತಃ ಕಂಡಕ್ಟರ್ ಆಗಿ ಟಿಕೆಟ್ ಮುರಿದು ಕೊಟ್ಟರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ, ಕಾಂಗ್ರೆಸ್ ಕಾರ್ಯಕರ್ತರು, ಬಸ್ ಸಿಬ್ಬಂದಿ ಮತ್ತಿತರರು ಇದ್ದರು.