ಹಾರ್ನ್‌ ಹಾಕಿದ್ದಕ್ಕೆ ಬಸ್‌ ಚಾಲಕನ ಮೇಲೆ ಹಲ್ಲೆ: ಬೈಕ್‌ ಸವಾರರಿಬ್ಬರು ಸೆರೆ

ಉಪ್ಪಿನಂಗಡಿ: ಹಾರ್ನ್‌ ಹಾಕಿದ ಕ್ಷುಲಕ ವಿಚಾರವನ್ನು ಮುಂದಿಟ್ಟುಕೊಂಡು ಬೈಕ್‌ ಸವಾರರಿಬ್ಬರು ರಾಜಹಂಸ ಬಸ್ಸನ್ನು ಅಡ್ಡಹಾಕಿ ಬಸ್‌ ಚಾಲಕನಿಗೆ ಹಲ್ಲೆ ನಡೆಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದಿದೆ.

AI Photo

ರಾಜಹಂಸ ಬಸ್ಸಿನ ಚಾಲಕ ರಿಯಾಜ್‌ ಅಹಮ್ಮದ್‌ ಹಾಗೂ ಪ್ರಯಾಣಿಕ ಅವಿನಾಶ್‌ ಹಲ್ಲೆಗೊಳಗಾದವರು. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿಗಳಾದ ಇಬ್ರಾಹಿಂ ಬ್ಯಾರಿ ಎಂಬವರ ಮಗ ಜುನೈದ್‌ (24) ಹಾಗೂ ಅಬ್ದುಲ್‌ ಲತೀಫ್ ಎಂಬವರ ಮಗ ಹಿಷಾಮ್‌ (18) ಹಲ್ಲೆ ನಡೆಸಿದ ದುಷ್ಕರ್ಮಿಗಳು.

ಘಟನೆಯ ವಿವರ: ಬೆಂಗಳೂರಿನಿಂದ ಮಂಗಳೂರಿ ನತ್ತ ಸಂಚರಿಸುತ್ತಿದ್ದ ರಾಜಹಂಸ ಬಸ್ಸಿನ ಚಾಲಕ ರಿಯಾಜ್‌ ಅಹಮ್ಮದ್‌ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್‌ ಸವಾರರಾದ ಜುನೈದ್‌ ಹಾಗೂ ಹಿಷಾಮ್ ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿ ಹಲ್ಲೆಯನ್ನು ತಡೆಯಲು ಬಂದ ಬಸ್ಸಿನ ಪ್ರಯಾಣಿಕ ಅವಿನಾಶ್‌ ಮೇಲೂ ಮುಗಿ ಬಿದ್ದ ಬೈಕ್‌ ಸವಾರರು ಹೆಲ್ಮೆಟ್‌ ನಿಂದ ಅವಿನಾಶ್‌ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾರೆ.
ಈ ಬಗ್ಗೆ ಬಸ್ಸಿನ ಚಾಲಕ ಬೈಕ್‌ ಸವಾರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಉಪ್ಪಿನಂಗಡಿ ಠಾಣಾ ಪೊಲೀಸ್‌ ಸಬ್‌ ಇನ್‌ಸ್ಪೆಪೆಕ್ಟರ್‌ ಗುರುನಾಥ್‌ ಹಾದಿಮನಿ ಮಿಂಚಿನ ಕಾರ್ಯಾಚರಣೆ ನಡೆಸಿ ಒಂದು ಗಂಟೆಯೊಳಗೆ ಆರೋಪಿ ಬೈಕ್‌ ಸವಾರರಿಬ್ಬರನ್ನೂ ಪತ್ತೆ ಹಚ್ಚಿದ್ದಾರೆ. ಆರೋಪಿಗಳ ವಿರುದ್ದ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಸಾರ್ವಜನಿಕ ಶಾಂತಿ ಭಂಗ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

 

error: Content is protected !!