ರೌಡಿ ಬಿಕ್ಲು ಹತ್ಯೆ: ಶಾಸಕ ಭೈರತಿ ಆಪ್ತನಿಗಾಗಿ ಶೋಧ!

ಬೆಂಗಳೂರು: ರೌಡಿಶೀಟರ್ ಶಿವಕುಮಾರ್ ಯಾನೆ ಬಿಕ್ಲು ಶಿವನ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಆಪ್ತ ಸಹಾಯಕ ಅಜಿತ್‌ಗೆ ಭಾರತಿನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಬಂಧನ ಭೀತಿಯಿಂದ ಅಜಿತ್ ನಾಪತ್ತೆಯಾಗಿದ್ದಾನೆ.
ಪೊಲೀಸರು ಆರೋಪಿ ಕಿರಣ್‌ನ ಮನೆಯ ಮೇಲೆ ದಾಳಿ ನಡೆಸಿದಾಗ ಅಜಿತ್‌ಗೆ ಸಂಬಂಧಿಸಿದ ಕೆಲವು ದಾಖಲೆಗಳು ದೊರೆತಿವೆ. ಈ ದಾಖಲೆಗಳ ಕುರಿತು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಅಜಿತ್‌ಗೆ ಸೂಚನೆ ನೀಡಿದ್ದರು. ಆದರೆ, ಅಜಿತ್ ವಿಳಾಸವಿಲ್ಲದ ಲೆಟರ್‌ಹೆಡ್‌ನಲ್ಲಿ ಉತ್ತರಿಸಿ, “ನಾನು ಹೈಕೋರ್ಟ್ ವಕೀಲ. ನನಗೂ ಕೊಲೆ ಆರೋಪಿಗಳಿಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದರೆ ಕಾನೂನು ರೀತಿಯಾಗಿ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದ್ದ. ಈ ಉತ್ತರಕ್ಕೆ ಸಂಬಂಧಿಸಿ ಪೊಲೀಸರು ಮತ್ತಷ್ಟು ಪ್ರಶ್ನೆಗಳನ್ನು ಕೇಳಿದ್ದರು. ಆದರೆ, ಇದೀಗ ಟಿ.ಸಿ. ಪಾಳ್ಯದಲ್ಲಿರುವ ಸಿನಿಮಾಸ್ ವಿ ಗ್ರೂಪ್ ಕಚೇರಿಯನ್ನು ಖಾಲಿ ಮಾಡಿಕೊಂಡು ಅಜಿತ್ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಇನ್ನು ಈ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್‌ 5ನೇ ಆರೋಪಿಯಾಗಿದ್ದಾರೆ.

error: Content is protected !!