ಪ್ರಜ್ವಲ್‌ ರೇವಣ್ಣಗೆ ಬೇಲಾ? ಜೈಲಾ?

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಎರಡನೇ ಬಾರಿಗೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿದ್ದು ಇಂದಿಗೆ ತೀರ್ಪನ್ನು ಕಾಯ್ದಿರಿಸಿದೆ.
ನಿನ್ನೆ ನಡೆದ ವಿಚಾರಣೆಯಲ್ಲಿ ಸಿಐಡಿಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದರು. ಪ್ರಜ್ವಲ್‌ ರೇವಣ್ಣ ಪರವಾಗಿ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, “ಪ್ರಜ್ವಲ್ ಬಂಧನವಾಗಿ 14 ತಿಂಗಳು ಕಳೆದಿವೆ. ಈ ಪ್ರಕರಣದಲ್ಲಿ ಸಹ-ಆರೋಪಿಯಾದ ಎಚ್‌.ಡಿ. ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದ್ದರಿಂದ, ಪ್ರಜ್ವಲ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಮೊದಲ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕರ್ನಾಟಕ ಹೈಕೋರ್ಟ್, ಮತ್ತು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದವು. ಇದಾದ ಬಳಿಕ, ಜೂನ್ 2025ರಲ್ಲಿ ಪ್ರಜ್ವಲ್ ಮತ್ತೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆಗ ಹೈಕೋರ್ಟ್, ವಿಚಾರಣಾಧೀನ ನ್ಯಾಯಾಲಯದಲ್ಲಿ ಜಾಮೀನು ಕೋರಲು ಸೂಚಿಸಿತ್ತು. ಇಂದು ಪ್ರಜ್ವಲ್‌ ಗೆ ಮತ್ತೆ ಜೈಲಾಗುತ್ತಾ ಅಥವಾ ಬೇಲಾಗುತ್ತಾ ಅನ್ನೋದು ನಿರ್ಧಾರವಾಗಲಿದೆ.

error: Content is protected !!