ಮಂಗಳೂರು: ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್ ಶ್ರೀದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರ ಬಂಟ್ವಾಳ ಇಲ್ಲಿ ಗ್ರಾಮೋತ್ಸವ ನಡೆಯಲಿದ್ದು, ಈ ಪ್ರಯುಕ್ತ ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವದ ಅಂಗವಾಗಿ ಆ.8ರಂದು ಭಾನುವಾರ ಮೂರು ಜಿಲ್ಲೆಗಳಲ್ಲಿ “ಬೃಹತ್ ಸ್ವಚ್ಚತಾ ಅಭಿಯಾನ” ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಸಹಕಾರರತ್ನ ಲİಎ. ಸುರೇಶ್ ರೈ ಮಾಹಿತಿ ನೀಡಿದರು.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಅವರು, ಗ್ರಾಮೋತ್ಸವದ ಪ್ರಯುಕ್ತ ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. 2025ರ ಗ್ರಾಮೋತ್ಸವದ ಕಾರ್ಯಕ್ರಮಗಳು ದಿನಾಂಕ 08.08.2025ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜರಗಲಿದೆ. ಗ್ರಾಮೋತ್ಸವದ ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಭಾಗಗಳಲ್ಲಿ ವೈದ್ಯಕೀಯ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಸ್ವಚ್ಚತಾ ಕಾರ್ಯಕ್ರಮವು ರಜತ ಸಂಭ್ರಮವನ್ನು ಆಚರಿಸುತ್ತಿರುವ ಈ ವರ್ಷ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ 365 ಸ್ಥಳಗಳಲ್ಲಿ ಏಕಕಾಲದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ “ಬೃಹತ್ ಸ್ವಚ್ಚತಾ ಅಭಿಯಾನ” ವನ್ನು ದಿನಾಂಕ 03.08.2025ನೇ ಆದಿತ್ಯವಾರದಂದು ಆಯೋಜಿಸಲಾಗಿದೆ. ಈ ಅಭಿಯಾನಕ್ಕೆ ಸರ್ವರೂ ಸಹಕರಿಸಿ ಯಶಸ್ವಿಗೊಳಿಸುವಂತೆ ಸುರೇಶ್ ರೈ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥಾನಂನ ಸ್ವಾಗತ ಸಮಿತಿ ಸದಸ್ಯ ಸಿ. ರಾಮ ಮೋಹನ್ ರೈ, ಕಾರ್ಯಾಧ್ಯಕ್ಷ ಕೃಷ್ಣಶೆಟ್ಟಿ ತಾಲೆಮಾರ್, ತಾಳಿಪಾಡಿಗುತ್ತು ಗೌತಮ್ ಶೆಟ್ಟಿ ಉಪಸ್ಥಿತರಿದ್ದರು.