ಧರ್ಮಸ್ಥಳ ಗಲಾಟೆ ಪ್ರಕರಣ: ಇತ್ತಂಡಗಳ ಹಲವರ ವಿರುದ್ಧ ಕೇಸ್‌, ಸುಮೋಟೊ‌ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಲ ಕ್ರಾಸ್ ಎಂಬಲ್ಲಿ ಆಗಸ್ಟ್‌ 6ರಂದು ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಎರಡೂ ತಂಡಗಳ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದೆ.

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳು

ಕುಡ್ಲ ರಾಂಪೇಜ್ ಅಜಯ್‌ ಮೇಲೆ ಹಲ್ಲೆ
ಅಜಯ ದೂರು: ಕುಡ್ಲ ರಾಂಪೇಜ್ ಎಂಬ ಯುಟ್ಯೂಬ್ ಚಾನೆಲ್ ಮಾಲಕ‌ ಅಜಯ್ ಎಂಬವರು ಆ.6ರಂದು ಸಂಜೆ, ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ, ವ್ಯಕ್ತಿಯೊರ್ವರೊಂದಿಗೆ ವಿಡಿಯೊ ಬೈಟ್ ಮಾಡುತ್ತಿದ್ದರು. ಆಗ ಸ್ಥಳಕ್ಕೆ ಸುಮಾರು 15 ರಿಂದ 50 ಜನರ ಕಿಡಿಗೇಡಿಗಳ ಗುಂಪು ಬಂದಿದ್ದು, ಕ್ಯಾಮರ ಮ್ಯಾನ್ ಸುಹಾಸ್, ಸಂಚಾರಿ ಸ್ಟುಡಿಯೋ ಸಂತೋಷ್ ಹಾಗೂ ಯುನೈಟೆಡ್ ಮೀಡಿಯಾ ಅಭಿಷೇಕ್ ಎಂಬವರಿಗೆ ಹಲ್ಲೆ ನಡೆಸಿ, ಅಜಯ್‌ ಅವರ ಕ್ಯಾಮರಾವನ್ನು ರಸ್ತೆಗೆಸೆದು ಹಾನಿಗೊಳಿಸಿ, ಅದರಲ್ಲಿದ್ದ ಮೆಮೊರಿ ಕಾರ್ಡ್ ಕಳವು ಮಾಡಿ, ಬಳಿಕ ಜೀವ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಅ.ಕ್ರ: 46/2025 ಕಲಂ: 189(2), 191(2), 115(2), 324(5) , 352, 307 ಜೊತೆಗೆ 190 ಬಿ.ಎನ್‌.ಎಸ್‌- 2023 ರಂತೆ ಪ್ರಕರಣದ ದಾಖಲಾದೆ.

ಪಾಂಗಳದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಸುಮೋಟೊ ಪ್ರಕರಣ ದಾಖಲು
ಅಂದು ಸಂಜೆ,  ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಳ ಕ್ರಾಸ್ ಎಂಬಲ್ಲಿ,  ಸುಮಾರು 25 ರಿಂದ 50 ಜನರು, ಎರಡು ಪ್ರತ್ಯೇಕ ಗುಂಪುಗಳಾಗಿ ಅಪರಾಧಿಕ ಕೃತ್ಯ ನಡೆಸಲು ಅಕ್ರಮ ಕೂಟ ಸೇರಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಧರ್ಮಸ್ಥಳ ಪೊಲೀಸ್‌ ಠಾಣಾ ಉಪನಿರೀಕ್ಷಕರು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು, ಸೇರಿದವರಲ್ಲಿ ಯಾವುದೇ ಅಹಿತಕರ ಘಟನೆಗೆ ನಡೆಸದೇ ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ. ಆದರೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡ್ಡಿಪಡಿಸಿ, ಸೇರಿದ್ದ ಗುಂಪುಗಳು ಪರಸ್ಪರ ಗಲಾಟೆ ನಡೆಸಿದ್ದಾರೆ ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಅ.ಕ್ರ: 47/2025 ಕಲಂ: 189(2), 191(2), 132, 324(6) ಜೊತೆಗೆ 190 ಬಿಎನ್‌ಎಸ್‌ ರಂತೆ ಸುಮೋಟೊ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಧರ್ಮಸ್ಥಳ ಠಾಣೆ ಮುಂದೆ ಅಕ್ರಮ ಕೂಟ: ಸುಮೋಟೊ ಕೇಸ್
ಆಗಸ್ಟ್‌ 6ರಂದು ಸಂಜೆ  ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಗೆ  ಸಂಬಂಧಿಸಿದಂತೆ, ಸುಮಾರು 50-100 ಮಂದಿ, ಧರ್ಮಸ್ಥಳ ಠಾಣಾ ಆವರಣ ಮುಂದೆ ಯಾವುದೇ ಪೂರ್ವಾನುಮತಿಯಿಲ್ಲದೇ, ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿದ್ದಾರೆ. ಅವರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 48/2025 ಕಲಂ: 189(2) ಜೊತೆಗೆ 190 ಬಿಎನ್‌ ಎಸ್‌ ರಂತೆ ಸುಮೋಟೊ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಮೋದ್‌ ಕುಮಾರ್‌ ಶೆಟ್ಟಿಗೆ ಹಲ್ಲೆ: ಪ್ರಕರಣ ದಾಖಲು
ಆ.6ರರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ, ಯೂಟ್ಯೂಬರ್ಸ್‌ಗಳಿಗೆ ಹಲ್ಲೆ ನಡೆದಿರುವ ವಿಚಾರ ತಿಳಿದು ಘಟನಾ ಸ್ಥಳಕ್ಕೆ ಬೆಳ್ತಂಗಡಿ ನಿವಾಸಿ ಪ್ರಮೋದ್‌ ಕುಮಾರ್ ಶೆಟ್ಟಿ (42) ಎಂಬವರು ಬಂದಿದ್ದರು. ಆಗ ಅಲ್ಲಿ ಸೇರಿದ್ದ ಸುಮಾರು 30 ರಿಂದ 40 ಜನರ ಗುಂಪು ಪ್ರಮೋದ್‌ ಕುಮಾರ್‌ ಶೆಟ್ಟಿಗೆ ಅವ್ಯಾಚವಾಗಿ‌ ಬೈದು, ಹಲ್ಲೆ ನಡೆಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಎರಡು ವಾಹನಗಳಿಗೆ ಹಾಗೂ ಕ್ಯಾಮರಾಕ್ಕೆ ಹಾನಿಗೊಳಿಸಿದ್ದಾಗಿ ಅವರು ದೂರು ನೀಡಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 49/2025 ಕಲಂ: 189(2), 191(2), 115(2), 110, 324(3),  352, 351(2) ಜೊತೆಗೆ 190 ಬಿಎನ್‌ ಎಸ್‌ ರಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳು

ಸುವರ್ಣ ಚಾನೆಲ್‌ನ ನ ಕ್ರೈಂ ರಿಪೋರ್ಟರ್ ಹರೀಶ್‌ಗೆ ಹಲ್ಲೆ
ಬೆಂಗಳೂರು ನಿವಾಸಿ, ಏಷಿಯನೆಟ್ ಸುವರ್ಣ ಚಾನೆಲ್‌ನ ಕ್ರೈಂ ರಿಪೋರ್ಟರ್ ಆಗಿರುವ ಹರೀಶ್ ಆರ್.(34)‌ ತನಗೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾಗಿ ಹಲವರ ವಿರುದ್ಧ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಇವರು ಆ.6ರಂದು ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ಹಲ್ಲೆಗೊಳಗಾದ ಗಾಯಾಳುಗಳ ಬಗ್ಗೆ ವರದಿ ಮಾಡಲು ಉಜಿರೆ ಬೆನಕ ಆಸ್ಪತ್ರೆಯ ಬಳಿ ತೆರಳಿದ್ದರು. ಈ ವೇಳೆ ಸ್ಥಳದಲ್ಲಿದ್ದ  ಗಿರೀಶ್ ಮಟ್ಟಣ್ಣನವರ್ ಎಂಬವರೊಂದಿಗೆ ವಿಡಿಯೋ ಬೈಟ್ ಕೊಡುವಂತೆ ಕೇಳಿದಾಗ, ಆರೋಪಿಗಳು ಏಕಾಏಕಿ ಬೈದಿದ್ದಾರೆ. ಸ್ಥಳದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ  ಮತ್ತು ಅವರೊಂದಿಗಿದ್ದ ಇತರರು ಕೂಡಾ ಹಲ್ಲೆ ನಡೆಸಿ ಅವ್ಯಾಚವಾಗಿ ಬೈದಿದ್ದಾರೆ. ಆ ವೇಳೆ ಸ್ಥಳಕ್ಕೆ ಬಂದ ಮತ್ತೋರ್ವ ಆರೋಪಿ ಸಮೀರ್ ಯೂಟ್ಯೂಬರ್ಸ್ ಎಂಬಾತನು ತನ್ನನ್ನು ಉದ್ದೇಶಿಸಿ ಜೀವ ಬೆದರಿಕೆ ಹಾಕಿದ್ದಾಗಿ ಹರೀಶ್‌ ದೂರು ನೀಡಿದ್ದಾರೆ.. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 75/2025 ಕಲಂ: 189(2), 191(1) (2), 115(2), 351(2), 352 ಜೊತೆಗೆ 190 ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.

ಅಜಿತ್‌ ಹನುಮಕ್ಕನವರ್‌ ವಿರುದ್ಧ ಕೇಸ್
ಬೆಳ್ತಂಗಡಿ ನಿವಾಸಿ ಗಣೇಶ್ ಶೆಟ್ಟಿ (28) ಎಂಬವರ ದೂರಿನಂತೆ, ಆ.6ರ ರಂದು ಧರ್ಮಸ್ಥಳದ ಪಾಂಗಳ ಎಂಬಲ್ಲಿ ಹಲ್ಲೆಗೊಳಗಾದವರನ್ನು ಚಿಕಿತ್ಸೆಗಾಗಿ ಉಜಿರೆ ಬೆನಕಾ ಆಸ್ಪತ್ರೆಗೆ ವಾಹನವೊಂದರಲ್ಲಿ ಕರೆತಂದಿದ್ದರು. ಆಗ ಗಾಯಾಳುಗಳನ್ನು ನೋಡಲು ಬಂದ ಮಹೇಶ್‌ ಶೆಟ್ಟಿ ತಿಮರೋಡಿ  ಹಾಗೂ ಗಿರೀಶ್‌ ಮಟ್ಟಣ್ಣನವರ್‌ ಅವರನ್ನು ಬೈಟ್‌ ಕೊಡುವಂತೆ ಆರೊಪಿ ಸುವರ್ಣ ನ್ಯೂಸ್‌ ವರದಿಗಾರ ಹಾಗೂ ಕ್ಯಾಮರಾಮೆನ್‌  ತಡೆದು ನಿಲ್ಲಿಸಿದ್ದಾರೆ. ಆದರೆ ಬೈಟ್ ಕೊಡಲು ನಿರಾಕರಿಸಿದಾಗ ಆರೋಪಿಗಳು ಅವಾಚ್ಯ  ಶಬ್ದಗಳಿಂದ ನಿಂದಿಸುತ್ತಾ, ತಳ್ಳಾಟ ನಡೆಸಿದ್ದಾರೆ. ಈ ಘಟನೆ ನಡೆದು ಕೆಲಹೊತ್ತಿನಲ್ಲಿ ಸುವರ್ಣ ಸುದ್ದಿ ವಾಹಿನಿಯಲ್ಲಿ  ಅಜಿತ್‌ ಹನುಮಕ್ಕನವರ್‌  ಎನ್ನುವ ನ್ಯೂಸ್‌ ಆಂಕರ್‌ , “ಸುವರ್ಣ ನ್ಯೂಸ್‌  ವರದಿಗಾರರ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿಯಿಂದ ಹಲ್ಲೆ” ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 76/2025 ಕಲಂ:126(2), 296, 351   ಜೊತೆಗೆ 3(5) ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.

ಅಕ್ರಮ ಕೂಟ, ಪೊಲೀಸರಿಂದ ಸುಮೋಟೊ ಕೇಸ್
ಆಗಸ್ಟ್‌ 6ರ ರಂದು ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ನಡೆದ ಹಲ್ಲೆಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಬೆಳ್ತಂಗಡಿ ಉಜಿರೆ ಬೆನಕ ಆಸ್ಪತ್ರೆಯ ಬಳಿ ಸಾರ್ವಜನಿಕರು ಜಮಾವಣೆಗೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದರು. ಆಗ ಸ್ಥಳದಲ್ಲಿ ಸುಮಾರು 50 ರಿಂದ 100 ಜನರು ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ, ಘೋಷಣೆಗಳನ್ನು ಕೂಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಸದಂತೆ ಹಾಗೂ ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ. ಆದರೆ ಆರೋಪಿಗಳು ಪೂರ್ವಾನುಮತಿ ಪಡೆಯದೇ ಅಕ್ರಮಕೂಟ ಸೇರಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 77/2025 ಕಲಂ:Sec 189(2)r/ w 190 BNS ಬಿಎನ್ಎಸ್ -2023 ರಂತೆ ಸುಮೋಟೊ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!