ಹೈದರಾಬಾದ್: ಚಂದಾನಗರದಲ್ಲಿರುವ ಖಜಾನಾ ಜ್ಯುವೆಲ್ಲರಿ ಅಂಗಡಿಯಲ್ಲಿ ಶಸ್ತ್ರಸಜ್ಜಿತ ಗುಂಪೊಂದು ದರೋಡೆ ಮಾಡಿ, ತಡೆಯಲೆತ್ನಿಸಿದ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿರುವ ಘಟನೆ ವರದಿಯಾಗಿದೆ.
6 ಮಂದಿ ಮುಸುಕುಧಾರಿಗಳು ಗುಂಡು ಹಾರಿಸಿ, ಸಿಸಿಟಿವಿ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು, ಅಂಗಡಿ ಪ್ರವೇಶಿಸುತ್ತಿದ್ದಂತೆ ಸಿಬ್ಬಂದಿಯನ್ನು ಬೆದರಿಸಲು ಪ್ರಾರಂಭಿಸಿದ್ದಾರೆ. ಗನ್ ತೋರಿಸಿ ಲಾಕರ್ ಕೀ ನೀಡಿ ಎಂದು ಬೆದರಿಸಿದ್ದಾರೆ. ನಂತರ ಶಾಪ್ನ ಸಹಾಯಕ ವ್ಯವಸ್ಥಾಪಕನಿಗೆ ಗನ್ ತೋರಿಸಿ ಹೆದರಿಸಿ ಲಾಕರ್ ಕೀ ನೀಡುವಂತೆ ಒತ್ತಾಯಿಸಿದ್ದಾರೆ. ತಾನು ಕೀ ನೀಡುವುದಿಲ್ಲ ಎಂದು ಹೇಳಿದ್ದಕ್ಕೆ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಶಾಪ್ನ ಉಪ ವ್ಯವಸ್ಥಾಪಕರ ಕಾಲಿಗೆ ಗಾಯವಾಗಿದೆ.
ಬಳಿಕ ಬಂಗಾರದ ಆಭರಣಗಳಿದ್ದ ಸ್ಟಾಲ್ಗಳ ಗಾಜುಗಳನ್ನು ಒಡೆದು ಹಾಕಿದ್ದಾರೆ. ಇದನ್ನು ತಡೆಯಲೆತ್ನಿಸಿದ ಸಿಬ್ಬಂದಿ ಮೇಲೆ ದಾಳಿ ಮಾಡಿ ಗುಂಡು ಹಾರಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಈ ಕುರಿತು ಮಾಹಿತಿ ತಿಳಿದ ತಕ್ಷಣ ಸೈಬರಾಬಾದ್ ಕಮಿಷನರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.