ಬೆಳ್ತಂಗಡಿ: ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳ ಪೋಸ್ಟ್ ಗಳಿಗೆ ಸಂಬಂಧಿಸಿ ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಕುಡ್ಲ ರಾಂ ಪೇಜ್ ನವರು ನಡೆಸಿರುವ ಸಂದರ್ಶನದಲ್ಲಿ ಗಿರೀಶ್ ಮಟ್ಟಣ್ಣನವರ್ ಜೈನರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂ ಪೇಜ್ ವಿರುದ್ಧ ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಿಕಾಸ್ ವಿಕ್ಕಿ ಹಿಂದು ಎಂಬ ಫೇಸ್ ಬುಕ್ ಪೇಜ್ ವಿರುದ್ಧ ಬೆಳ್ತಂಗಡಿ ನಿವಾಸಿ ವಿಜಯ ಎಂಬವರು ನೀಡಿದ ದೂರಿನಂತೆ ಹಾಗೂ ಏನ್ರಿ ಗೌಡ್ರೆ ಎಂಬ ಫೇಸ್ ಬುಕ್ ಪೇಜ್ ವಿರುದ್ಧ ಧನಂಜಯ ಜೈನ್ ಎಂಬವರು ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾಯರ್ ಜಗದೀಶ್ ಸಾರ್ವಜನಿಕರಿಗೆ ದುಷ್ಟೇರಣೆ ಉಂಟು ಮಾಡುವ ಸಂದೇಶ ನೀಡಿದ್ದಲ್ಲದೆ ಅಪರಾಧ ಎಸಗಲು ಪ್ರೇರಣೆ ನೀಡಿದ್ದಾರೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗುವಂತಹ ಫೋಸ್ಟ್ ಹಾಕಿದ್ದಾರೆಂದು ಲೋಕೇಶ್ ಪೂಜಾರಿ ಎಂಬಾತನ ವಿರುದ್ಧ ಪ್ರಭಾಕರ ಗೌಡ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಯೂಟ್ಯೂಬ್ ನಲ್ಲಿ ಅಪರಾಧ ನಡೆಸಲು ಪ್ರೇರಣೆಯಾಗುವ ಸಂದೇಶಗಳನ್ನು ಹಂಚಿರುವುದಾಗಿ ಆರೋಪಿಸಿ ನವೀನ್ ಜೈನ್ ಎಂಬಾತನ ವಿರುದ್ಧ ಬೆಳ್ತಂಗಡಿ ನಿವಾಸಿ ಉದಯ ಪೂಜಾರಿ ಎಂಬವರು ನೀಡಿದ ದೂರನ್ನು ಆಧರಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.