ದರ್ಶನ್ ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ನಟಿ ರಮ್ಯಾ

ಬೆಂಗಳೂರು: ಸುಪ್ರೀಂ ಆದೇಶದ ಬೆನ್ನಲ್ಲೇ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿರುವ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ, ಅವರು ಮೊದಲು ಅಕ್ಕಪಕ್ಕದವರ ಸಹವಾಸ ಬಿಡಬೇಕು ಕಿವಿಮಾತು ಹೇಳಿದ್ದಾರೆ.

 

ದರ್ಶನ್ ಜೈಲುಪಾಲಾಗಿರುವ ಬಗ್ಗೆ ಮಾತನಾಡಿರುವ ನಟೊಇ ರಮ್ಯ , ನಟ ದರ್ಶನ್ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಸಿನಿಮಾ ಶೂಟಿಂಗ್ ವೇಳೆ ತಾವು ನಡೆದುಕೊಂಡು ಬಂದ ಹಾದಿ ಬಗ್ಗೆ ನನ್ನ ಬಳಿ ಹಂಚಿಕೊಂಡಿದ್ದರು. ನನಗೆ ಹೆಮ್ಮೆ ಅನಿಸಿತ್ತು. ಲೈಟ್ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಇತ್ತೀಚಿಗೆ ಅವರ ನಡವಳಿಕೆಯಿಂದ ತುಂಬಾ ಬೇಜಾರಾಗಿತ್ತು. ಎಲ್ಲೋ ಒಂದು ಕಡೆ ಅವರು ತಮ್ಮ ಜೀವನ ಹಾಳು ಮಾಡಿಕೊಂಡರು. ಈ ಮಟ್ಟಕ್ಕೆ ಬೆಳೆದ ಮೇಲೆ ಜವಾಬ್ದಾರಿ ಇರುತ್ತದೆ. ಅವರ ಅಕ್ಕಪಕ್ಕ ಯಾರು ಒಳ್ಳೆಯವರಿಲ್ಲ ಅನಿಸುತ್ತೆ ಗೊತ್ತಿಲ್ಲ. ತಮ್ಮ ಸುತ್ತಮುತ್ತ ಒಳ್ಳೆಯವರನ್ನು ಇಟ್ಟುಕೊಂಡು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಮೊದಲು ಅಕ್ಕಪಕ್ಕದವರ ಸಹವಾಸ ಬಿಡಬೇಕು ಎಂದು ಹೇಳಿದ್ದಾರೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!