ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಉದ್ಘಾಟಿಸಿದ ಶಾಸಕ ಕಾಮತ್

ಮಂಗಳೂರು: ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಛಾವಣಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ನಿಮ್ಮೆಲ್ಲರ ಅನುಕೂಲಕ್ಕಾಗಿ ಶಾಸಕರ ನಿಧಿಯಿಂದ ಅನುದಾನವನ್ನು ಹೊಂದಿಸಿಕೊಂಡು ಈ ಆಟೋರಿಕ್ಷಾ ನಿಲ್ದಾಣದ ಮೇಲ್ಛಾವಣಿಯನ್ನು ನಿರ್ಮಿಸಲಾಗಿದ್ದು, 79ನೇ ಸ್ವಾತಂತ್ರ್ಯೋತ್ಸವದ ಶುಭ ದಿನದಂದೇ ಉದ್ಘಾಟನೆಗೊಳ್ಳುತ್ತಿದೆ. ಇಲ್ಲಿನ ಚಾಲಕ ಬಂಧುಗಳಿಗೆ ಇದರ ಉಪಯೋಗವಾದರೆ ಅದಕ್ಕಿಂತ ಸಂತೋಷ ಬೇರೇನಿಲ್ಲ, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಭಾಗ್ಯ ಶೇಟ್, ಪಿ.ಸಿ ಗುರು, ಪ್ರಮೋದ್ ಆಚಾರ್ಯ, ಗಿರೀಶ್ ಪೈ, ಗಣಪತಿ ಕಾಮತ್, ರವೀಂದ್ರ ಮಲ್ಯ, ವೇಣುಗೋಪಾಲ್, ಗುರುಚರಣ್, ರಾಮಣ್ಣ, ಸೇರಿದಂತೆ ನಿಲ್ದಾಣದ ಆಟೋ ಚಾಲಕರು ಉಪಸ್ಥಿತರಿದ್ದರು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

 

 

 

error: Content is protected !!