ಮಂಗಳೂರು: ಕನ್ನಡ ಜಾಗೃತಿ ಸಮಿತಿಗೆ ರೆಹಮಾನ್ ಖಾನ್ ಕುಂಜತ್ತಬೈಲ್ ಆಯ್ಕೆ

ಮಂಗಳೂರು: ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ರಚಿಸಿರುವ ಕನ್ನಡ ಜಾಗೃತಿ ಸಮಿತಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ರೆಹಮಾನ್ ಖಾನ್ ಕುಂಜತ್ತಬೈಲ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ರಾಜ್ಯದ ಪ್ರತಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿ ರಚಿಸಲಾಗಿದ್ದು, ಕನ್ನಡದ ಅಭಿವೃದ್ಧಿ ಮತ್ತು ಪ್ರಚಾರ-ಪ್ರಸಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ದೃಷ್ಟಿಯಿಂದ ಈ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆಗೆ ನೆಡೆಸುವ ಕಾರ್ಯಕ್ರಮಗಳನ್ನು ರೂಪಿಸಲಿದೆ.

ರೆಹಮಾನ್ ಖಾನ್ ಕುಂಜತ್ತಬೈಲ್ ಅವರು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ರಂಗ ಸ್ವರೂಪ (ರಿ) ಕುಂಜತ್ತಬೈಲ್ ತಂಡದ ಅಧ್ಯಕ್ಷ, ಮರಕಡ ಸರ್ಕಾರಿ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ನಾಡು ಮತ್ತು ನುಡಿಯ ಮೇಲೆ ಅಪಾರ ಪ್ರೀತಿ ಮತ್ತು ಶ್ರದ್ಧೆ ಹೊಂದಿರುವ ರೆಹಮಾನ್ ಖಾನ್ ಅವರು ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ.

error: Content is protected !!