ಅಕ್ರಮ ಶಸ್ತ್ರಾಸ್ತ್ರ ದಾಸ್ತಾನು ಪ್ರಕರಣ: ತಿಮರೋಡಿ ಎಸ್ಕೇಪ್

ಬೆಳ್ತಂಗಡಿ: ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಶೋಧದ ವೇಳೆ ಅಕ್ರವಾಗಿ ದಾಸ್ತಾನು ಇರಿಸಿದ್ದ 2 ತಲವಾರ್ ಮತ್ತು 1 ಬಂದೂಕು ಪತ್ತೆಯಾದ ಬಗ್ಗೆ ಎಸ್.ಐ.ಟಿ ಅಧಿಕಾರಿ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ಬೆಳ್ತಂಗಡಿ ಪೊಲೀಸರು ಉಜಿರೆಯ ತಿಮರೋಡಿ ನಿವಾಸಕ್ಕೆ ಇಂದು(ಸೆ.19) ಬೆಳಗ್ಗೆ 6 ಗಂಟೆಗೆ ಬಂಧಿಸಲು ತೆರಳಿದಾಗ ಮನೆಯಿಂದ ಮೊದಲೇ ಮಹೇಶ್ ಶೆಟ್ಟಿ ತಿಮರೋಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಬುರುಡೆ ಪ್ರಕರಣದ ವಿಚಾರವಾಗಿ ಬೆಳ್ತಂಗಡಿ ಎಸ್‌ಐಟಿ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಆ.26ರಂದು ಶೋಧ ನಡೆಸಿದ್ದರು. ಆ ವೇಳೆ ಅಲ್ಲಿ ಎರಡು ತಲವಾರು, ಒಂದು ಬಂದೂಕು ಸಿಕ್ಕಿತ್ತು. ಅದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.

error: Content is protected !!