ಟಯರ್ ಸಿಡಿದು ಕಾರು ಬಾವಿ ಪಾಲು: ಮೂವರು ಸಾಧುಗಳು ಸ್ಥಳದಲ್ಲೇ ಸಾವು, ಓರ್ವ ನಾಪತ್ತೆ

ಮಧ್ಯಪ್ರದೇಶ: ಕಾರಿನ ಚಕ್ರ ಸಿಡಿದು ನಿಯಂತ್ರಣ ಕಳೆದುಕೊಂಡ ಕಾರೊಂದು ಹೆದ್ದಾರಿ ಬಳಿಯ ಬಾವಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಶುಕ್ರವಾರ(ಸೆ.19) ಸಂಭವಿಸಿದೆ.

ಘಟನೆ ಕುರಿತು ಮಾಹಿತಿ ನೀಡಿದ ಅಧಿಕಾರಿ ಮುಖೇಶ್ ದ್ವಿವೇದಿ, ಕಾರಿನಲ್ಲಿ ಒಟ್ಟು ಏಳು ಮಂದಿ ಸಾಧುಗಳು ಚಿತ್ರಕೂಟದಿಂದ ಬೇತುಲ್‌ ಕಡೆಗೆ ಪ್ರಯಾಣ ಮಾಡುತ್ತಿದ್ದರು ಈ ವೇಳೆ ಕಾರು ಛಿಂದ್ವಾರದ ಬೇತುಲ್ ರಸ್ತೆಯಲ್ಲಿ ಬರುತ್ತಿದ್ದಂತೆ ಕಾರಿನ ಟಯರ್ ಸ್ಫೋಟಗೊಂಡಿದೆ ಪರಿಣಾಮ ನಿಯಂತ್ರಣ ಕಳೆದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಅಲ್ಲೇ ಪಕ್ಕದಲ್ಲಿದ್ದ ತಡೆಗೋಡೆ ಇಲ್ಲದ ಬಾವಿಗೆ ಬಿದ್ದಿದೆ, ಘಟನೆಯಲ್ಲಿ ಮೂವರು ಸಾಧುಗಳು ಮೃತಪಟ್ಟಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಸಾಧು ನಾಪತ್ತೆಯಾಗಿದ್ದು ಅವರ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

error: Content is protected !!