ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ವಿಭಾಗದ ಕೊನೆಯ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಮ್ ಇಂಡಿಯಾ ಸುಲಭವಾಗಿ ವಿಜಯ ಸಾಧಿಸಿದೆ. ಇದರಿಂದ ಭಾರತ ತಂಡಕ್ಕೆ ಮತ್ತೊಂದು ಗೆಲುವು ಒಲಿದು ಬಂದಿದೆ.
ಟಾಸ್ ಗೆದ್ದ ಶ್ರೀಲಂಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಭಿಷೇಕ್ ಶರ್ಮಾ ಅವರ ಮಿಂಚಿನ ಅರ್ಧಶತಕ ಮತ್ತು ತಿಲಕ್ ವರ್ಮಾ ಬ್ಯಾಟಿಂಗ್ ಬಲದಿಂದ ಭಾರತ ತಂಡವು ಶ್ರೀಲಂಕಾ ಎದುರು 20 ಓವರ್ಗಳಲ್ಲಿ 5 ವಿಕೆಟ್ಗಳಿಗೆ 202 ರನ್ ಗಳಿಸಿತು.
ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡದ ಬ್ಯಾಟರ್ಗಳ ಘರ್ಜನೆ ಜೋರಾಗಿಯೇ ಇತ್ತು. ಆರಂಭಿಕ ಬ್ಯಾಟರ್ ಪಥುಮ್ ನಿಸಾಂಕ ಅಮೋಘ ಶತಕ ಬಾರಿಸಿ ಶ್ರಿಲಂಕಾಗೆ ಗೆಲುವು ತಂದು ಕೊಟ್ಟೇ ಬಿಟ್ಟಿತು ಎಂದುಕೊಂಡಿದ್ದರು. ಆದರೆ ಕೊನೆಯಲ್ಲಿ ಮ್ಯಾಚ್ ಡ್ರಾ ಆಗಿತ್ತು. ಶ್ರೀಲಂಕಾ 5 ವಿಕೆಟ್ ಗಳಿಗೆ 202 ರನ್ ಗಳಿಸಿ ಪಂದ್ಯ ‘ಟೈ’ ಆಯಿತು.
ಹೀಗಾಗಿ ಸೂಪರ್ ಓವರ್ ಅನ್ನು ಆಡಿಸಲಾಯಿತು. ಸೂಪರ್ ಓವರ್ನಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಬ್ಯಾಟಿಂಗ್ ಮಾಡಲು ಹರಸಾಹಸ ಪಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡಕ್ಕೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೇವಲ 2 ರನ್ ಬಿಟ್ಟುಕೊಟ್ಟರು. ಭಾರತದ ಸೂರ್ಯಕುಮಾರ್ ಯಾದವ್ ತಾವೆದುರಿಸಿದ ಮೊದಲ ಎಸೆತದಲ್ಲಿ 3 ರನ್ ಗಳಿಸಿ, ಭಾರತ ತಂಡಕ್ಕೆ ಸೂಪರ್ ಗೆಲುವು ತಂದುಕೊಟ್ಟರು.