ಉಡುಪಿ: ಕರ್ವಾಲು ತ್ಯಾಜ್ಯ ಘಟಕದಲ್ಲಿ ಬೆಂಕಿ, ಕೋಟ್ಯಂತರ ನಷ್ಟ

ಉಡುಪಿ: ನಗರಸಭೆಗೆ ಸೇರಿರುವ ಅಲೆವೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕರ್ವಾಲುವಿನ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಬೆಳಗಿನ ಜಾವ ಸುಮಾರು 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು.

ಉಡುಪಿ ನಗರಸಭೆಯ ಕರ್ವಾಲಿನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ: ಕೋಟ್ಯಂತರ ರೂ. ನಷ್ಟ

ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಘಟಕವನ್ನು ಆವರಿಸಿ, ಕಟ್ಟಡ, ಶೆಡ್‌ನಲ್ಲಿದ್ದ ಯಂತ್ರೋಪಕರಣಗಳು ಮತ್ತು ತ್ಯಾಜ್ಯ ಸಂಪೂರ್ಣವಾಗಿ ಸುಟ್ಟುಹೋಗಿವೆ.

ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಿಂದ ಸುಮಾರು ₹6-7 ಕೋಟಿ  ನಷ್ಟ ಉಂಟಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!