ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ಮೀನು ಹಿಡಿಯಲು ನದಿಗೆ ಹೋದ ವ್ಯಕ್ತಿಯೊಬ್ಬರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮನೋಹರ್ ಪುತ್ರನ್ ಮೃತ ವ್ಯಕ್ತಿ

ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!