ಬ್ರಹ್ಮಾವರ: ಮಾಜಿ ಶಾಸಕ ಗೋಪಾಲ ಭಂಡಾರಿ(48)ಯವರ ಪುತ್ರಸುದೀಪ್ ಭಂಡಾರಿಯವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ(ಅ.13) ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ರೈಲು ಹಳಿಯ ಬಳಿ ನಡೆದಿದೆ.
ಎರಡು ಬಾರಿ ಶಾಸಕರಾಗಿದ್ರು ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿಯವರು ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ಹಾಗೂ ಎಲ್ಲರಿಗೂ ಹತ್ತಿರವಾಗಿದ್ದ ಸುದೀಪ್ ರವರ ಸಾವಿನ ಸುದ್ದಿ ಕೇಳಿ ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ಆಘಾತಗೊಂಡಿದ್ದಾರೆ.
ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಸುದೀಪ್ ತಂದೆ ಹೆಚ್. ಗೋಪಾಲ್ ಭಂಡಾರಿಯವರು 1999ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ನಂತರ ಎರಡನೇ ಬಾರಿ 2008ರಲ್ಲಿಯೂ ಶಾಸಕರಾಗಿದ್ದರು. ಹೆಚ್. ಗೋಪಾಲ್ ಭಂಡಾರಿಯವರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಗೋಪಾಲ್ ಭಂಡಾರಿ ಅವರಿಗಿಂತ ಮುಂಚೆ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಪ್ರತಿನಿಧಿಸುತ್ತಿದ್ದರು.
ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ತಿಳಿಸಿದ್ದಾರೆ.