ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ.
ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಇವರು ಮೊಬೈಲ್ ನಂಬರ್ಗಳನ್ನು ನೀಡುವಂತೆ ಕಿರುಕುಳ ನೀಡಲೆತ್ನಿಸಿದರು ಎನ್ನಲಾಗಿದೆ. ಬಳಿಕ ವಿದ್ಯಾರ್ಥನಿಯರು ತಪ್ಪಿಸಿ ಮನೆಗೆ ತಲುಪಿದ್ದರು.
ಈ ಬಗ್ಗೆ ವಿದ್ಯಾರ್ಥಿನಿಯರು ಮಂಜೇಶ್ವರ ಠಾಣಗೆ ನೀಡಿದ ದೂರಿನಂತೆ ಇಬ್ಬರನ್ನು ಬಂಧಿಸಲಾಗಿದೆ.