ಪುತ್ತೂರು : ಪುತ್ತೂರು ನಗರ ಪೊಲೀಸರು ಮನೆ ಕಳ್ಳತನದ ಪ್ರಕರಣವನ್ನು ಬಯಲು ಮಾಡಿ, ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುತ್ತೂರಿನ ಕಬಕ ಗ್ರಾಮದ ಸಿಟಿಗುಡ್ಡೆ ಮನೆ ನಿವಾಸಿ ಪ್ರವೀಣ್ (27) ಬಂಧಿತ ಆರೋಪಿಯಾಗಿದ್ದು. ಈತನಿಂದ ಚಿನ್ನದ ಬಳೆ, ಕಿವಿಯೋಲೆ, ಚಿನ್ನದ ಸರ ಹಾಗೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪುತ್ತೂರು ನಿವಾಸಿ ರೇವತಿ, ದಿನಾಂಕ 12.10.2025 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯಿಂದ ಚಿನ್ನಾಭರಣ ಮತ್ತು ನಗದು ಹಣ ಕಳುವಾದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಅ.ಕ್ರ 89/2025, ಕಲಂ 331(3), 305 ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಯಿತು. ತನಿಖೆಯ ವೇಳೆಯಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.