ಉಡುಪಿ: ಇಲ್ಲಿನ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ಮತ್ತಾಕೆಯ ಪ್ರೇಮಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ರಾತ್ರಿ ಬೆಳಕಿಗೆ ಬಂದಿದೆ.
ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಘಟನೆ ನಡೆದಿದ್ದು ಮೃತರನ್ನು ಪವಿತ್ರ(17) ಹಾಗೂ ಮಲ್ಲೇಶ(23) ಎಂದು ಗುರುತಿಸಲಾಗಿದೆ.
ಪವಿತ್ರಾಳ ತಾಯಿ ಊರಿಗೆ ಹೋಗಿದ್ದಾಗ ಮಲ್ಲೇಶ ಮನೆಗೆ ಬಂದಿದ್ದು ನೇಣಿಗೆ ಶರಣಾಗಿದ್ದಾರೆ.

ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಉಡುಪಿ ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.