ಗಂಡನ ಮನೆಯ ಕಲಹದಿಂದ ಬೇಸತ್ತು ಮಗಳೊಂದಿಗೆ ನದಿಗೆ ಹಾರಿದ ತಾಯಿ !

ಹಾವೇರಿ: ವರದಾಹಳ್ಳಿ ಗ್ರಾಮದಲ್ಲಿ ಮಗಳ ಜೊತೆ ತಾಯಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ(ಅ.19) ಮಧ್ಯಾಹ್ನ ಸುಮಾರು 3 ಗಂಟೆಗೆ ನಡೆದಿದೆ.

ಸವಿತಾ ನಾಗರಾಜ್ ಉಳ್ಳಾಗಡ್ಡಿ (38 ವರ್ಷ) ಹಾಗೂ ಕಾವ್ಯಾ (12 ವರ್ಷ) ಮೃತರು.

ಗಂಡನ ಮನೆಯಲ್ಲಿ ದಿನನಿತ್ಯ ನಡೆಯುತ್ತಿದ್ದ ಕಲಹದಿಂದ ಮನನೊಂದು ಸವಿತಾ ಅವರು ಮಗಳ ಸಮೇತ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರಿ ಕಾವ್ಯಾ ಅವರ ಮೃತದೇಹ ಈಗಾಗಲೇ ಸಿಕ್ಕಿದ್ದು, ಆದರೆ ತಾಯಿ ಸವಿತಾ ಮೃತದೇಹಕ್ಕಾಗಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಹುಡುಕಾಟ ಮುಂದುವರಿಸಿದ್ದಾರೆ. ಬೋಟ್ ಮೂಲಕ ಕಳೆದೆರಡು ತಾಸುಗಳಿಂದ ವರದಾ ನದಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

error: Content is protected !!