ಉಳ್ಳಾಲ: ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಮಂಗಳೂರು: ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಅಕ್ಷರ ನಗರ ಮಲಾರ್ ನಿವಾಸಿ ಅಮೀರ್ ಮಲಾರ್ (46) ನಾಲ್ಕು ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಬೆಂಗಳೂರಿಗೆ ತೆರಳಿ ಕಾಣೆಯಾಗಿದ್ದಾರೆ.

2022ರ ಜೂನ್ 11ರಂದು ಅವರು ಕೊನೆಯ ಬಾರಿ ಕುಟುಂಬದವರೊಂದಿಗೆ ದೂರವಾಣಿ ಮೂಲಕ ಮಾತನಾಡಿ “ಬೆಂಗಳೂರು ತಲುಪಿದ್ದೇನೆ” ಎಂದು ತಿಳಿಸಿದ್ದರು. ಅದರ ನಂತರದಿಂದ ಇಂದಿನವರೆಗೆ ಕುಟುಂಬದವರೊಂದಿಗೆ ಯಾವುದೇ ಸಂಪರ್ಕ ಸಾಧಿಸದಿರುವುದರಿಂದ, ಅವರ ಕಾಣೆಯಾದ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ಅಮೀರ್ ಮಲಾರ್ ಅವರ ಎತ್ತರ 5.9 ಅಡಿ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ, ಕಪ್ಪು–ಬಿಳಿ ಮಿಶ್ರಿತ ಗಡ್ಡ ಹೊಂದಿದ್ದಾರೆ. ತಲೆಯ ಮುಂಭಾಗದಲ್ಲಿ ಕೂದಲು ಇಲ್ಲ. ಕಾಣೆಯಾದ ದಿನ ಅವರು ನೀಲಿ ಬಣ್ಣದ ಚೌಕಳಿ ಶರ್ಟ್ ಧರಿಸಿದ್ದರು. ಅವರು ತುಳು, ಕನ್ನಡ ಮತ್ತು ಬ್ಯಾರಿ ಭಾಷೆ ಮಾತನಾಡುತ್ತಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಅಮೀರ್ ಮಲಾರ್ ಅವರ ಸುಳಿವು ಅಥವಾ ಮಾಹಿತಿ ಯಾರಿಗಾದರೂ ತಿಳಿದಿದ್ದರೆ ತಕ್ಷಣ ಕೊಣಾಜೆ ಪೊಲೀಸ್ ಠಾಣೆ ಅಥವಾ ಹತ್ತಿರದ ಯಾವುದೇ ಪೊಲೀಸ್ ಠಾಣೆಗೆ ಸಂಪರ್ಕಿಸಲು ಠಾಣಾಧಿಕಾರಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

error: Content is protected !!