ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಆರಂಭ

ಮಂಗಳೂರು: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಅ. 27 ರಿಂದ ಆರಂಭಿಸಲಿದ್ದು, ವಾರದಲ್ಲಿ ಮೂರು ದಿನ ಲಭ್ಯವಿರುತ್ತದೆ. ಈ ಸೇವೆಯು ಎರಡು ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ.

ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು ನಗರಗಳ ನಡುವೆ ವೇಗದ ಸಾರಿಗೆ ಸಂಪರ್ಕಕ್ಕಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಲಭ್ಯವಿದ್ದು, 620 ಕಿ.ಮೀ. ದೂರವನ್ನು ಕ್ರಮಿಸಲು ಸುಮಾರು 8 ಗಂಟೆ 40 ನಿಮಿಷಗಳನ್ನು ತೆಗೆದುಕೊಳ್ಳುತ್ತಿದೆ.\

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಆದರೆ, ಹೊಸ ವಿಮಾನ ಸೇವೆಯಿಂದಾಗಿ ಪ್ರಯಾಣಿಕರು 7 ಗಂಟೆಗೂ ಅಧಿಕ ಸಮಯವನ್ನು ಉಳಿಸಬಹುದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಹೊಸ ಮಾರ್ಗದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದು, “ಪ್ರಕೃತಿ, ಸಂಸ್ಕೃತಿ ಮತ್ತು ಪ್ರಶಾಂತತೆ ಮೇಳೈಸುವ ಒಂದು ಕರಾವಳಿಯಿಂದ ಮತ್ತೊಂದು ಕರಾವಳಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ,” ಎಂದು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ.

error: Content is protected !!