“ಕೊಡಗಿನ ಕುಲದೇವತೆ ಕಾವೇರಿ” ಕೃತಿ ಮಂಗಳೂರಿನಲ್ಲಿ ಬಿಡುಗಡೆ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ 45ನೇ ಸರಣಿ ಕೃತಿಯಾಗಿ “ಕೊಡಗಿನ ಕುಲದೇವತೆ ಕಾವೇರಿ” ಪುಸ್ತಕವನ್ನು ಮಂಗಳೂರಿನ ಪತ್ರಿಕಾ ಭವನದಲ್ಲಿ ಬಿಡುಗಡೆ ಮಾಡಲಾಯಿತು.

ಅಮೃತ ಪ್ರಕಾಶ ಪತ್ರಿಕೆಯ ಸರಣಿ ಕೃತಿ 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಈ ಕೃತಿಯನ್ನು ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ಬಿಡುಗಡೆ ಮಾಡಿದರು.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಬಿ.ಕೆ ಗಣೇಶ್ ರೈ ಅವರು ಕಟ್ಟಿಕೊಟ್ಟಿದ್ದಾರೆ .ಹೆಚ್ಚಿನ ಎಲ್ಲರಿಗೂ ಕಾವೇರಿ ಮಾತೆಯ ಪುರಾಣ ಕಥೆಗಳ ಪರಿಚಯ ಇರುವುದಿಲ್ಲ. ಈ ಕೃತಿಯ ಓದುಗರ ಮೂಲಕ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಅರೇಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಗೌಡ ಮಾವಜಿ ಮಾತನಾಡಿ ಕಾವೇರಿ ಮಾತೆಯ ಪುರಾಣವನ್ನು ತಿಳಿಸುವ ಈ ಕೃತಿಯು ಕನ್ನಡ, ಇಂಗ್ಲಿಷ್, ಅರೆ ಭಾಷೆ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಗೊಂಡಿದೆ. ಕಾವೇರಿ ಮಾತೆಯ ಪುರಾಣವನ್ನು ತಿಳಿಸುವ ಈ ಕೃತಿಯು ಕಾವೇರಿ ಮಾತೆಯ ಮಹಿಮೆಯನ್ನು ಸಾರಿದೆ . ಒಂದು ಸಂಗ್ರಯ ಯೊಗ್ಯ ಕೃತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೃತಿಯ ಲೇಖಕ ಮತ್ತು ವಿನ್ಯಾಸಗಾರ, ಅಮೃತ ಪ್ರಕಾಶ ಪತ್ರಿಕೆಯ ಉಪಸಂಪಾದಕ ಬಿ.ಕೆ. ಗಣೇಶ್ ರೈ, ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ನಮ್ಮ ಕುಡ್ಲ ವಾಹಿನಿಯ ವಾರ್ತಾವಾಚಕಿ ಡಾ. ಪ್ರಿಯ ಹರೀಶ್ ನಿರ್ವಹಿಸಿದರು.

error: Content is protected !!