ಮಂಗಳೂರು: ನಗರದ ಕೊಟ್ಟಾರ ಬಳಿ ಸಿಟಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿದ ಘಟನೆ ಶುಕ್ರವಾರ(ಅ.31) ನಡೆದಿದೆ.

ಬಸ್ಸಿನ ಬ್ರೇಕ್ ಪೆಡಲ್ ಸಮಸ್ಯೆಯಿಂದಾಗಿ ಈ ಘಟನೆ ಸಂಭವಿಸಿದ್ದು, ಆದರೆ ಚಾಲಕ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಬಸ್ ಚಲಾಯಿಸುತ್ತಿದ್ದರಿಂದ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಚಾಲಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳವುದಾಗಿ ಸಂಚಾರ ವಿಭಾಗದ ಡಿಸಿಪಿ ಭರವಸೆ ನೀಡಿದ್ದಾರೆ.