ಕಾಂಗ್ರೆಸ್‌ ಧುರೀಣ ಹೆಚ್​.ವೈ.ಮೇಟಿ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H​.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H​.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.

2008ರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಇವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಮೇಟಿ, ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹೆಚ್​.ವೈ.ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಫರ್ಧಿಸಿ ಗೆಲುವಿನ ನಗೆ ಬೀರಿದ್ದರು. ಇತ್ತೀಚೆಗಷ್ಟೇ ಹೆಚ್​.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

 

error: Content is protected !!