ಮಡಂತ್ಯಾರು: ವ್ಯಕ್ತಿಯೋರ್ವ ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45ರ ಹೊತ್ತಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕೇಶ್ವರಿ ಪದವು ನಿವಾಸಿ ಸಂಕೇತ್ (28) ಬಂಧಿತ ಆರೋಪಿ.

ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.