ಹೋಟೆಲ್ ಕಾರ್ಮಿಕನೋರ್ವ ಕಾರಿಡಾರ್‌ನಿಂದ ಜಾರಿ ಚರಂಡಿಗೆ ಬಿದ್ದು ಸಾವು

ಉಪ್ಪಿನಂಗಡಿ: ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ಚರಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ ಗಣೇಶ್ ನಾಯ್ಕ (60) ಮೃತ ವ್ಯಕ್ತಿ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಇವರು ಉಪ್ಪಿನಂಗಡಿಯ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೇಲೊಂದರಲ್ಲಿ ಕಾರ್ಮಿಕರಾಗಿದ್ದು, ಮಂಗಳವಾರ ನಸುಕಿನ ವೇಳೆ ಎದ್ದು ಕಾರಿಡಾರ್ ಬಳಿ ಬಂದಾಗ ಅಯತಪ್ಪಿ ಕೆಳಗಿನ ಚರಂಡಿಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!