ಬಜ್ಪೆ: ಮದರಸಕ್ಕೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿನಾಯಿ ದಾಳಿ

ಬಜ್ಪೆ: ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಮದರಸಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಗುರುವಾರ(ನ.06) ನಡೆದಿದೆ.

ಸೌಹಾರ್ದ ನಗರದ ನಿವಾಸಿ ಮುಹಮ್ಮದ್‌ ಅಝರ್‌ ಅವರ ಪುತ್ರ ಅಹಿಲ್ ಗಾಯಗೊಂಡ ಬಾಲಕ.

ಬೆಳಗ್ಗೆ ಮನೆಯ ಸಮೀಪದ ಮದರಸಕ್ಕೆ ತೆರಳಿ ವಾಪಸ್‌ ಮನೆಗೆ ಮರಳುವ ವೇಳೆ ಏಕಾಏಕಿ ಸುತ್ತುವರಿದ ಬೀದಿ ನಾಯಿಗಳು ಮಗುವಿನ ಕೆನ್ನೆ, ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ‌.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಬೀದಿನಾಯಿಗಳ ಕಾಟ ಮತ್ತು ದಾಳಿಯಿಂದ ರಕ್ಷಣೆ ನೀಡುವಂತೆ ಕಳೆದ ಮೂರು ವರ್ಷಗಳಿಂದ ಕಂದಾವರ ಗ್ರಾಮ ಪಂಚಾಯತ್‌ ಗೆ ಮನವಿ ಸಲ್ಲಿಸುತ್ತಾ ಬಂದಿದೇವೆ. ಆದರೆ ಈವರೆಗೂ ಯಾವುದೇ ಕ್ರಮವಹಿಸಿಲ್ಲ. ಕೇಳಿದರೆ ಬೀದಿ ನಾಯಿಗಳನ್ನು ಕೊಲ್ಲದಂತೆ ನ್ಯಾಯಾಲಯದ ಆದೇಶ ಇದೆ ಎಂದು ಹೇಳುತ್ತಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

error: Content is protected !!