ಸಲಿಂಗ ಕಾಮಕ್ಕೆ ಅಡ್ಡಿ ಎಂದು ಐದು ತಿಂಗಳ ಕಂದಮ್ಮನನ್ನೇ ಉಸಿರುಗಟ್ಟಿಸಿ ಕೊಂದ ಮೂರು ಮಕ್ಕಳ ತಾಯಿ!

ಆನೇಕಲ್: ಮೂವರು ಮಕ್ಕಳ ತಾಯಿಯೊಬ್ಬಳ ಸಲಿಂಗ ಕಾಮದ ಹುಚ್ಚು ಪುಟ್ಟ ಕಂದಮ್ಮನನ್ನೇ ಕೊಲೆ ಮಾಡುವ ಮಟ್ಟಕ್ಕೆ ಹೋಗಿದೆ. ಇಂಥದೊಂದು ಭಯಾನಕ ಕೃತ್ಯ ಕರ್ನಾಟಕ ಗಡಿ ಭಾಗ ಅನೇಕಲ್​ ಸಮೀಪ ತಮಿಳುನಾಡಿನ ಕೆಳಮಂಗಲಂ ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ. ಮೂರು ಮಕ್ಕಳ ತಾಯಿ ಭಾರತಿ (26) ಹಾಗೂ ಸುಮಿತ್ರಾ (22) ಎಂಬಿಬ್ಬರು ಸಲಿಂಗ ಕಾಮಿಗಳನ್ನು ಕೆಳಮಂಗಲಂ ಪೊಲೀಸರು ಬಂಧಿಸಿದ್ದಾರೆ.

ಚಿನ್ನಟ್ಟಿಯ ಸುರೇಶ್ ಮತ್ತು ಆರೋಪಿ ಭಾರತಿಗೆ ಮದುವೆಯಾಗಿ ಐದು ವರ್ಷವಾಗಿದೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು, ಒಂದು ಗಂಡು ಮಗುವಿದೆ. ಭಾರತಿ ತನ್ನದೇ ಏರಿಯಾದ ಯುವತಿ ಸುಮಿತ್ರಾ ಎಂಬಾಕೆಯ ಜೊತೆಗೆ ಸ್ನೇಹ ಬೆಳೆಸಿದ್ದು, ಅದು ಸಲಿಂಗ ಕಾಮಕ್ಕೆ ತಿರುಗಿತ್ತು. ಪತಿ ಇಲ್ಲದೆ ಇದ್ದಾಗ ಭಾರತಿ-ಸುಮಿತ್ರಾ ಮನೆಯಲ್ಲಿ ಇಬ್ಬರೂ ಸಲಿಂಗಕ್ರೀಡೆ ಆಡುತ್ತಿದ್ದರು.

ನಗ್ನ ವಿಡಿಯೋ ಕಾಲ್ ಮಾಡಲು ಮತ್ತು ಖಾಸಗಿ ಫೋಟೊಗಳನ್ನು ಹಂಚಿಕೊಳ್ಳಲೆಂದೇ ಪ್ರತ್ಯೇಕ ಮೊಬೈಲ್ ಕೂಡ ಇಟ್ಟುಕೊಂಡಿದ್ದರು. ಸ್ನಾನ ಮಾಡುವಾಗ ನಗ್ನವಾಗಿ ವಿಡಿಯೋ ಕಾಲ್ ಮಾಡುವುದು, ಇಬ್ಬರೂ ಕಿಸ್ ಮಾಡುತ್ತಾ ಪೋಟೋ ಕ್ಲಿಕ್ಲಿಸಿಕೊಳ್ಳುತ್ತಿದ್ದರು. ಭಾರತಿ ತನ್ನ ಎದೆ ಮೇಲೆ ‘sumi’ ಎಂದು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದಳು. ಇಬ್ಬರೂ ಪರಸ್ಪರ ಚಾಕುವಿನಿಂದ ಕೈಕೊಯ್ದುಕೊಂಡಿದ್ದರು. ಅಲ್ಲದೆ, ಪೋಟೋಗಳನ್ನು ಹಾಕಿ ರೀಲ್ಸ್ ವಿಡಿಯೋ ಕೂಡ ಮಾಡಿದ್ದರು.

ಕ್ರೀಡೆಗೆ ಅಡ್ಡಿ-ಮಗುವಿನ ಕೊಲೆ
ಐದು ತಿಂಗಳ ಹಿಂದೆಯಷ್ಟೇ ಭಾರತಿ ಗಂಡು ಮಗುವಿಗೆ ಜನ್ಮ‌ ನೀಡಿದ್ದಳು. ಮಗು ಆದಾಗಿನಿಂದ ಭಾರತಿ ತನ್ನನ್ನು ದೂರ ಮಾಡುತ್ತಿದ್ದಾಳೆ ಎಂದು ಭಾವಿಸಿದ್ದ ಸುಮಿತ್ರಾ ತಗಾದೆ ತೆಗೆದಿದ್ದು, ಇಬ್ಬರ ಮಧ್ಯೆ ಪದೇ ಪದೇ ಜಗಳವಾಗಿ ಕಿತ್ತಾಡುತ್ತಿದ್ದರು. ಮಗುವಿನಿಂದಾಗಿಯೇ ಈ ಗಲಾಟೆಯಾಗುತ್ತಿದ್ದು, ಮಗುವನ್ನು ಕೊಲೆ ಮಾಡು ಎಂದು ಭಾರತಿಗೆ ಸುಮಿತ್ರಾ ತಿಳಿಸಿದ್ದಳು. ಅದರಂತೆ, ಭಾರತಿ ತನ್ನ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು.

ಮಗು ಹಾಲು ಕುಡಿಯುವಾಗ ಗಂಟಲಲ್ಲಿ ಸಿಕ್ಕಿ ನೆತ್ತಿಗೇರಿ ಸಾವನ್ನಪ್ಪಿದೆ ಎಂದು ಭಾರತಿ ಕಥೆಕಟ್ಟಿದ್ದಳು. ನಂತರ ಕುಟುಂಬಸ್ಥರು ಮಗುವಿನ ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಇದಾದ ನಂತರ ಭಾರತಿ ಮತ್ತು ಸುಮಿತ್ರಾ ಬಳಸುತ್ತಿದ್ದ ಮೊಬೈಲ್ ಆಕೆಯ ಪತಿ ಸುರೇಶ್​​ಗೆ ಸಿಕ್ಕಿತ್ತು. ಅದರಿಂದಾಗಿ ಇಬ್ಬರ ಸಲಿಂಗ ಕಾಮದ ವಿಷಯ ಮತ್ತು ಮಗುವಿನ ಕೊಲೆ ರಹಸ್ಯ ಬಯಲಾಯಿತು. ಇದರ ಬೆನ್ನಲ್ಲೇ, ಪೋಲಿಸರಿಗೆ ದೂರು ನೀಡುವುದಾಗಿ ಹೇಳಿ ಸುರೇಶ್ ಮನೆಯಿಂದ ತೆರಳಿದ್ದರು. ಈ ವೇಳೆ ಪೋನ್ ಮಾಡಿದ ಭಾರತಿ, ಮಗುವನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಎಲ್ಲ ಘಟನೆಯ ನಂತರ, ಮೊಬೈಲ್​ನಲ್ಲಿ ಸಿಕ್ಕಿದ ಆಡಿಯೋ, ವಿಡಿಯೋ, ಪೋಟೋಗಳ ಸಮೇತವಾಗಿ ಸುರೇಶ್ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಕೆಳಮಂಗಲಂ ಪೊಲೀಸ್ ಠಾಣೆಯಲ್ಲಿ ಭಾರತಿ ಮತ್ತು ಸುಮಿತ್ರಾ ವಿರುದ್ದ ಪ್ರಕರಣ ದಾಖಲಾಗಿದೆ. ಕೆಳಮಂಗಲಂ ತಹಶೀಲ್ದಾರ್ ಗಂಗೈ ರವರ ಸಮ್ಮುಖದಲ್ಲಿ ಮಗುವಿನ ಶವವನ್ನು ಮತ್ತೆ ಹೊರ ತೆಗೆದುಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಭಾರತಿ ಮತ್ತು ಸುಮಿತ್ರಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com
error: Content is protected !!