ಬಂಟ್ವಾಳ: ವಿಟ್ಲ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಚರಂಡಿಯೊಂದರಲ್ಲಿ ಸೋಮವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ (55) ಮೃತ ವ್ಯಕ್ತಿ.
ಅಡಿಕೆ ಸಂಸ್ಕರಣಾ ಘಟಕವೊಂದರಲ್ಲಿ ಉದ್ಯೋಗಿಯಾಗಿದ್ದ ಮಂಜುನಾಥ ಅವರು ಭಾನುವಾರ ರಾತ್ರಿ 9:30 ರ ನಂತರ ಕಾಣೆಯಾಗಿದ್ದರು. ಸೋಮವಾರ ಬೆಳಿಗ್ಗೆ, ಪಾದಚಾರಿಗಳು ಚರಂಡಿಯಲ್ಲಿ ಅವರ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿ ಮದ್ಯಪಾನ ವ್ಯಸನಿಯಾಗಿದ್ದು, ಅವರು ಚರಂಡಿಗೆ ಬಿದ್ದು ಸಾವನ್ನಪ್ಪಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಹಿತಿ ತಿಳಿದ ತಕ್ಷಣ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಠಾಣಾಧಿಕಾರಿ ರಾಮಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.