ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಇಂದು(ನ.15) ಬೆಳಿಗ್ಗೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

ಸಿಗ್ನಲ್ನಲ್ಲಿ ಸರತಿಯಲ್ಲಿದ್ದ ಎರಡು ಟ್ಯಾಂಕರ್ಗಳು, ಮಧ್ಯದಲ್ಲಿ ನಿಂತಿದ್ದ ಕಾರು ಮತ್ತು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಸಿಗ್ನಲ್ ಬಳಿ ನಿಂತಿದ್ದ ಟ್ಯಾಂಕರ್ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೋ ರಿಕ್ಷಾ ನಿಂತಿದ್ದವು. ಇದೇ ವೇಳೆ ಹಿಂದಿನಿಂದ ಬಂದ ಮತ್ತೊಂದು ಟ್ಯಾಂಕರ್ ನೇರವಾಗಿ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಮುಂದೆ ನಿಂತಿದ್ದ ಕಾರಿಗೆ ಅಪ್ಪಳಿಸಿ, ಬಳಿಕ ಆ ಕಾರು ಅದರ ಮುಂದಿದ್ದ ಟ್ಯಾಂಕರ್ಗೆ ಡಿಕ್ಕಿಯಾಗುವಂತಾಗಿದೆ.

ಎರಡು ಟ್ಯಾಂಕರ್ಗಳ ಮಧ್ಯೆ ಸಿಲುಕಿದ ಆಟೋ ರಿಕ್ಷಾ ಸಂಪೂರ್ಣ ಜಜ್ಜಿಗೊಂಡಿದ್ದು, ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಅದೇ ವೇಳೆ ಅಲ್ಲಿ ಇದ್ದ ಆಟೋರಿಕ್ಷಾ 2 ಟ್ಯಾಂಕರ್ ನ ಮಧ್ಯೆ ಸಿಲುಕಿಕೊಂಡು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.