ಇಂಜಿನಿಯರಿಂಗ್ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ!!

ಮಣಿಪಾಲ: ಒಡಿಶಾ ಮೂಲದ ಎಂಐಟಿ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹಠಾತ್ ಬೆನ್ನು ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.

ಆಕಾಂಕ್ಷಾ ಮೋಹಾಂತಿ (25) ಮೃತ ವಿದ್ಯಾರ್ಥಿನಿ.

ಮಣಿಪಾಲದ ಹೊಟೇಲೊಂದರಲ್ಲಿ ಊಟ ಮಾಡಿ ವಾಸ್ತವ್ಯದ ಕೊಠಡಿಗೆ ತೆರಳಿದ ಆಕೆಗೆ ಏಕಾಏಕಿ ಗಂಭೀರ ಸ್ವರೂಪದಲ್ಲಿ ಬೆನ್ನು ನೋವು ಕಾಣಿಸಿಕೊಂಡಿತು. ನಡೆದಾಡಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದ ಅವರನ್ನು ತತ್‌ಕ್ಷಣ ಸ್ನೇಹಿತರು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಯುವತಿ ಈಗಾಗಲೇ ಕೊನೆಯುಸಿರೆಳೆದಿರುವುದಾಗಿ ತಿಳಿಸಿದರು.

ಸಾವಿಗೆ ಹೃದಯಾಘಾತ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!