ಏಳನೇ ತರಗತಿ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಏಳನೇ ತರಗತಿ ವಿದ್ಯಾರ್ಥಿನಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತಹ ಅಮಾನವೀಯ ಘಟನೆಯು ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೆಂಬರ್ 23ರಂದೇ ಘಟನೆ ನಡೆದಿದ್ದು, ಆರೋಪಿಗಳು ಬಾಲಕಿ ಕುಟುಂಬಸ್ಥರಿಗೆ ಜೀವ ಬೆದರಿಕೆಯನ್ನೊಡ್ಡಿದ್ದರಿಂದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳಾದ ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರು ಹಿಟ್ಟುಬೀಸಲು ತೆರಳಿದ್ದ ಬಾಲಕಿ ಮೇಲೆ ಕೃತ್ಯ ನಡೆಸಿದ್ದು, ಮನೆಯಿಂದ ಮುನ್ನೂರು ಮೀಟರ್ ದೂರ ಇರುವ ಹಿಟ್ಟಿನ ಗಿರಣಿಗೆ ಹಿಟ್ಟು ರುಬ್ಬಿಸಿಕೊಂಡು ಬರಲು ಸಂತ್ರಸ್ತ ಬಾಲಕಿ ತೆರಳಿದ್ದ ವೇಳೆ ಆಕೆಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ.

ಘಟನೆ ಸಂಬಂಧಿಸಿದಂತೆ ಮುರಗೋಡ ಠಾಣೆ ಪೊಲೀಸರು ಸೋಮವಾರ(ಡಿ.1) ದೂರು ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

error: Content is protected !!