ಮಂಗಳೂರು: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪುಣ್ಯ ತಿಥಿಯ ಸಲುವಾಗಿ ಕಲ್ಕೂರ ಪ್ರತಿಷ್ಠಾನವು ವಿಶ್ವೇಶತೀರ್ಥ ಶ್ರೀಪಾದರ ಬಗ್ಗೆ ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಡಿ.29 ರಂದು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪ್ರಬಂಧ ಬರೆಯಲು ಅವಕಾಶವನ್ನು ನೀಡಲಾಗುತ್ತಿದೆ.

ವಿಷಯ: ಕಾಲೇಜು ವಿಭಾಗ – ರಾಷ್ಟ್ರ ಮತ್ತು ಧರ್ಮ ವಿಶ್ವೇಶತೀರ್ಥರ ಚಿಂತನೆ ನಾನು ಕಂಡಂತೆ. ಮುಕ್ತ ವಿಭಾಗ – ಶ್ರೀ ವಿಶ್ವೇಶತೀರ್ಥರು, ಯತಿವರ್ಯರು ವಿಶ್ವ ಮಾನ್ಯರು, ಅವಲೋಕನ – ಅನುಸಂಧಾನ ಮೂರು ಪುಟಗಳೊಳಗೆ ಪ್ರಬಂಧ ಬರೆದು, ಡಿ. 24 ರೊಳಗೆ ಸ್ವ-ವಿಳಾಸ, ಸಂಪರ್ಕ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್ಬೈಲ್, ಮಂಗಳೂರು ವಿಳಾಸಕ್ಕೆ ಕಳುಹಿಸಬೇಕು. ವಿಜೇತರಿಗೆ ಬಹುಮಾನಗಳನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
