ಮಂಗಳೂರು: ಮಂಡಲ – ಮಕರಮಾಸ ಋತುವಿನ 18 ದಿನಗಳು ಪೂರ್ಣಗೊಂಡಿದ್ದು, ಶಬರಿಮಲೆಯಲ್ಲಿ ಭಕ್ತಾದಿಗಳ ಸಂಖ್ಯೆ 15 ಲಕ್ಷ ದಾಟಿದೆ. ಯಾತ್ರಾರ್ಥಿಗಳ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ಡಿ.7 ರಿಂದ ಜ.19 ರವರಗೆ ವಿಶೇಷ ರೈಲುಗಳು ಸಂಚರಿಸಲಿವೆ.

ಮಂಗಳೂರು ಜಂಕ್ಷನ್-ತಿರುವನಂತಪುರ ನಾರ್ತ್ ವೀಕ್ಲಿ ಎಕ್ಸ್ ಪ್ರೆಸ್ ಸ್ಪೆಷಲ್ (ನಂ. 06041) ರೈಲು ಡಿ.7ರಿಂದ ಜ.18ರ ವರಗೆ ಪ್ರತಿ ರವಿವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್ ತಲುಪಲಿದೆ.

ಅದೇ ರೀತಿ ತಿರುವನಂತಪುರ ನಾರ್ತ್-ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ ಸ್ಪೆಷಲ್ (ನಂ.06042) ರೈಲು ಡಿ.8ರಿಂದ ಜ.19ರ ವರಗೆ ಪ್ರತಿ ಸೋಮ ವಾರ ಬೆಳಗ್ಗೆ 8.30ಕ್ಕೆ ತಿರುವನಂತಪುರ ನಾರ್ತ್ ನಿಂದ ಹೊರಟು ಅದೇ ದಿನ ರಾತ್ರಿ 8.30ಕ್ಕೆ ಸೆಂಟ್ರಲ್ ತಲುಪಲಿದೆ.
ಇನ್ನು ವೃಶ್ಚಿಕ ಮಾಸದ ಕಾರ್ತಿಕ ದಿನವಾದ ಇಂದು ಶಬರಿಮಲೆ ಸನ್ನಿಧಾನದಲ್ಲಿ ಕಾರ್ತಿಕ ದೀಪ ಬೆಳಗಲಿದೆ.