ಡಿಜಿಟಲ್ ಅರೆಸ್ಟ್ ಬೆದರಿಕೆ : ಬ್ಯಾಂಕ್ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ವೃದ್ಧ ದಂಪತಿಯ 84 ಲಕ್ಷ ರೂ. ಬಚಾವ್

ಮಂಗಳೂರು: ಮುಲ್ಕಿಯ ದಾಮಸಕಟ್ಟೆಯಲ್ಲಿ ವೃದ್ಧ ದಂಪತಿ ಡಿಜಿಟಲ್ ಅರೆಸ್ಟ್ ಜಾಲಕ್ಕೆ ಬಿದ್ದು ತಮ್ಮ ಖಾತೆಯಲ್ಲಿದ್ದ 84 ಲಕ್ಷವನ್ನು ಸೈಬರ್ ವಂಚಕರಿಗೆ ನೀಡಲು ಹೋಗಿ ಬ್ಯಾಂಕ್ ಮ್ಯಾನೇಜರ್ ಒಬ್ಬರ ಸಮಯ ಪ್ರಜ್ಞೆಯಿಂದ ಹಣ ಉಳಿಸಿಕೊಂಡಿದ್ದಾರೆ.

ಮುಲ್ಕಿಯ ಬೆನೆಡಿಕ್ಟ್ ಫೆರ್ನಾಂಡಿಸ್(84) ಮತ್ತು ಲಿಲ್ಲಿ ಫೆರ್ನಾಂಡಿಸ್(71) ದಂಪತಿಗೆ ಸೋಮವಾರ ವಾಟ್ಸ್‌ಆ್ಯಪ್ ಮೂಲಕ ವೀಡಿಯೊ ಕರೆ ಮಾಡಿ ತಾವು ಉತ್ತರ ಪ್ರದೇಶದ ಸಿಐಡಿ ಪೊಲೀಸರು ಎಂದು ಹೇಳಿ ನಕಲಿ ದಾಖಲೆಗಳನ್ನು ತೋರಿಸಿ ಪರಿಚಯಿಸಿಕೊಂಡು ನೀವು ಮುಂಬೈನ ಬ್ಯಾಂಕ್‌ ಖಾತೆಯಿಂದ ಆರು ಕೋಟಿ ರೂ. ಡ್ರಾ ಮಾಡಿ ವಂಚಿಸಿದ್ದೀರಿ. ನಿಮ್ಮ ವಿರುದ್ಧ ವಂಚನೆ ಕೇಸು ದಾಖಲಾಗಿದೆ. ಆ ಹಣವನ್ನು ಹಿಂದಿರುಗಿಸಬೇಕು. ಹಣ ನೀಡುವವರೆಗೆ ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ. ಡಿಜಿಟಲ್ ಅರೆಸ್ಟ್‌ನಿಂದ ತಪ್ಪಿಸಿಕೊಳ್ಳಲು ಯೋಚಿಸಬೇಡಿ. ಒಂದು ವೇಳೆ ಮನೆಯಿಂದ ಹೊರ ಬಂದರೆ ನಮ್ಮ ಸಿಬ್ಬಂದಿ ನಿಮ್ಮನ್ನು ಗುಂಡಿಕ್ಕಿ ಕೊಲ್ಲುತ್ತಾರೆ. ತಮ್ಮ ಖಾತೆಯಲ್ಲಿರುವ 84 ಲಕ್ಷ ರೂ.ನ್ನು ತಕ್ಷಣಕ್ಕೆ ವರ್ಗಾಯಿಸಬೇಕು ಎಂದು ಬೆದರಿಕೆ ಹಾಕಿದ್ದರು.

ದಂಪತಿ ಬುಧವಾರ ಕಿನ್ನಿಗೋಳಿಯ ಕೆನರಾ ಬ್ಯಾಂಕ್‌ಗೆ ಹಣ ವರ್ಗಾಯಿಸಲು ತೆರಳಿದಾಗ, ಮ್ಯಾನೇಜರ್‌ ರಾಯಿಸ್ಟನ್ ಅವರ ವರ್ತನೆಯಲ್ಲಿ ಅನುಮಾನಗೊಂಡು ಬ್ಯಾಂಕ್ ಮ್ಯಾನೇಜರ್ ವಂಚಕರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಿಲ್ಲ. ಅಲ್ಲದೇ, ಕಿನ್ನಿಗೋಳಿ ಪರಿಸರದ ಬೀಟ್ ಪೊಲೀಸ್ ಸಿಬ್ಬಂದಿ ಯಶವಂತ್ ಕುಮಾರ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಕಿಶೋರ್‌ರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸ್ ಸಿಬ್ಬಂದಿಗಳು ಬ್ಯಾಂಕ್ ಮ್ಯಾನೇಜರ್ ಗೆ ಕರೆ ಮಾಡಿ ವಿಚಾರ ತಿಳಿಸಿದ್ದು ಹಣ ವರ್ಗಾವಣೆ ಮಾಡದಂತೆ ಸೂಚಿಸಿದ್ದರು. ಅಲ್ಲದೆ, ವೃದ್ದ ದಂಪತಿಗೆ ತಿಳುವಳಿಕೆ ನೀಡಿ, ದೊಡ್ಡ ಮೊತ್ತದ ಹಣವನ್ನು ಉಳಿಸಿರುತ್ತಾರೆ. ಇದರ ಬಗ್ಗೆ ಮುಲ್ಕಿ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿ

ಮುಲ್ಕಿ ಪೊಲೀಸರು ದಂಪತಿಯ ಮನೆಗೆ ತೆರಳಿ ಮೊಬೈಲ್ ಪರಿಶೀಲಿಸಿದಾಗ ಅವರು ಡಿಜಿಟಲ್ ಅರೆಸ್ಟ್ ಒಳಗಾಗಿರುವುದು ಕಂಡುಬಂದಿದೆ. ಕೂಡಲೇ ಪೊಲೀಸ್ ಸಿಬ್ಬಂದಿಗಳು ಬ್ಯಾಂಕ್ ಮ್ಯಾನೇಜರ್ ಗೆ ಕರೆ ಮಾಡಿ ವಿಚಾರ ತಿಳಿಸಿದ್ದು ಹಣ ವರ್ಗಾವಣೆ ಮಾಡದಂತೆ ಸೂಚಿಸಿದ್ದರು. ಅಲ್ಲದೆ, ವೃದ್ದ ದಂಪತಿಗೆ ತಿಳುವಳಿಕೆ ನೀಡಿ, ದೊಡ್ಡ ಮೊತ್ತದ ಹಣವನ್ನು ಉಳಿಸಿರುತ್ತಾರೆ. ಇದರ ಬಗ್ಗೆ ಮುಲ್ಕಿ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮುಲ್ಕಿ ಠಾಣಾ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

error: Content is protected !!