ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅವರಿಗೆ 2013-14 ರಿಂದ 2018-19 ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ನೀಡಿದ್ದ ನೋಟಿಸ್ ನಿಂದ ಹೈಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ.

ಹೊಂಬಾಳೆ ಕನ್ಸ್ಟ್ರಕ್ಷನ್ಸ್ಗೆ ಸಂಬಂಧಿಸಿ ಐಟಿ ಇಲಾಖೆ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ನಟ ಯಶ್ ವಾಸಿಸಿದ್ದ ಹೊಸಕೆರೆಹಳ್ಳಿ ಮನೆ, ಅವರು ಬಾಡಿಗೆ ಪಡೆದು ಉಳಿದುಕೊಂಡಿದ್ದ ತಾಜ್ ವೆಸ್ಟ್ ಎಂಡ್ ರೂಮ್ ಶೋಧಿಸಿತ್ತು. 2021ರಲ್ಲಿ ನಟ ಯಶ್ಗೆ ಆದಾಯ ತೆರಿಗೆ ಕಾಯ್ದೆ ಸೆ.153ಸಿ ಅಡಿ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ನಟ ಯಶ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಮನೆ ಶೋಧಿಸಿದ ಬಳಿಕವೂ ‘ಶೋಧನೆ ನಡೆಸದ ವ್ಯಕ್ತಿ’ ಎಂದು ಪರಿಗಣಿಸಿ ಐಟಿ ನೋಟಿಸ್ ನೀಡಿದ್ದು ಏಕೆ ಎಂಬುದು ಯಶ್ ಪ್ರಶ್ನೆ ಆಗಿತ್ತು. ‘ತಮ್ಮ ನಿವಾಸ ಶೋಧಿಸಲಾಗಿದೆ. ಆದರೂ ಶೋಧ ನಡೆಸದೇ ಇರುವವರಿಗೆ ನೀಡುವ 153ಸಿ ನೋಟಿಸ್ ನೀಡಲಾಗಿದೆ. ಇದು ಕಾನೂನು ಬಾಹಿರವೆಂದು’ ಯಶ್ ಪರ ವಕೀಲರು ವಾದಿಸಿದ್ದಾರೆ.
‘ಹೊಂಬಾಳೆ ಕನ್ಸ್ಟ್ರಕ್ಷನ್ನ ವಿಜಯ್ ಕುಮಾರ್ ವಿರುದ್ಧ ಶೋದನೆ ವಾರಂಟ್ ಪಡೆಯಲಾಗಿತ್ತು. ಹೊಂಬಾಳೆಗೆ ಸಂಬಂಧಪಟ್ಟಂತೆ ಮಾತ್ರ ಯಶ್ ನಿವಾಸದಲ್ಲಿ ಶೋಧಿಸಲಾಗಿದೆ. ಹೀಗಾಗಿ ಯಶ್ ಶೋಧನೆಗೊಳಗಾದ ವ್ಯಕ್ತಿಯಲ್ಲ’ ಎಂದು ಐಟಿ ವಾದ ಮಾಡಿದೆ. ವಾದ ಪ್ರತಿವಾದ ಗಮನಿಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಈ ನೋಟಿಸ್ ರದ್ದು ಮಾಡಿ ಎಂದು ಆದೇಶ ನೀಡಿದೆ.