ಬೆಂಗಳೂರು: ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ಜಾಮೀನು ಪಡೆದು ಹಾಯಾಗಿ ಹೊರಗೆ ಸುತ್ತಾಡಿಕೊಂಡಿದ್ದ ಅವರು ಸುಪ್ರೀಂಕೋರ್ಟ್ ಬೇಲ್ ರದ್ದು ಮಾಡುತ್ತಿದ್ದಂತೆ ಮರಳಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಕಠಿಣವಾಗಿದ್ದು, ದರ್ಶನ್ ತತ್ತರಿಸಿ ಹೋಗಿದ್ದಾರಂತೆ. ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ ನಟ ದರ್ಶನ್ ಜೊತೆಗಾರರಾದ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಾವರನ್ನು ಒಂದೇ ಸೆಲ್ನಲ್ಲಿ ಇರಿಸಲಾಗಿದೆ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನದ ಹಿಂದೆ ಸೆಲ್ನಲ್ಲಿ ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ನಡೆದಿದ್ದು, ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದನು
ವಕೀಲರ ನೇಮಕ ವಿಚಾರವಾಗಿಯೂ ಎಲ್ಲರ ನಡುವೆ ಗಲಾಟೆ ಶುರುವಾಗಿದೆ. ಅಲ್ಲದೇ ನಾನು ಇಲ್ಲೆ ಇದ್ದರೆ ಸಾಯೋದಾಗಿ ಅನುಕುಮಾರ್ ಹೇಳಿಕೊಂಡಿದ್ದಾರಂತೆ. ಅನುಕುಮಾರ್ಗೆ ಜಾಮೀನು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ದರ್ಶನ್ ಚಿತ್ರಹಿಂಸೆ ತಡೆಯಲಾಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ಹೀಗಾಗಿ, ದರ್ಶನ್ ಸೆಲ್ ಮೇಲೆ ವಿಶೇಷ ಕಾಳಜಿ ಇಡಲಾಗಿದೆ. ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿಕೊಂಡಿದ್ದಾರೆ.