ಯುವಕನ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ: ಕೃತ್ಯ ಎಸಗಿ ಸೆಲ್ಫಿ ವಿಡಿಯೋ ಮಾಡಿ ಸಂಭ್ರಮಿಸಿದ ಹಂತಕರು!

ಹಾಸನ: ಯುವಕನೋರ್ವನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದೇ ಅಲ್ಲದೆ ಹಂತಕರು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದ ಭೀಭತ್ಸ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್ ಕೀರ್ತಿ(22) ಬರ್ಬರವಾಗವಿ ಕೊಲೆಗೀಡಾದ ಯುವಕ. ಈತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಹಂತಕರು. ನಾವೇ ಇವನನ್ನು ಹೊಡೆದು ಕೊಂದಿದ್ದೇವೆಂದು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಕೀರ್ತಿ ರೀಲ್ಸ್ ಮಾಡುತ್ತಾ ಸ್ನೇಹಿತರ ಜೊತೆ ಸುತ್ತಾಡ್ತಾ ಇದ್ದವನು ನಿನ್ನೆ ಎಷ್ಟೊತ್ತಾದ್ರು ಮನೆಗೆ ಬಂದಿರಲಿಲ್ಲ. ಎಲ್ಲರೂ ಏನಾಯ್ತು ಎಂದು ಎಲ್ಲರೂ ಆತಂಕದಲ್ಲಿರುವಾಗ ಬೆಳಿಗ್ಗೆ ವೀಡಿಯೋ ವೊಂದು ವೈರಲ್ ಆಗಿದೆ. ಕ್ರೂರಿಯೊಬ್ಬ ಶವದ ಮುಂದೆ ಸೆಲ್ಪೀ ವೀಡಿಯೋ ಮಾಡಿ ನಾವು ಸಾಯಿಸಿದ್ದೇವೆ ಎಂದು ಹೇಳುತ್ತ ಕ್ರೌರ್ಯ ಮೆರೆದಿದ್ದಾನೆ. ಈ ವೀಡಿಯೋ ಜಾಡು ಹಿಡಿದು ತನಿಖೆಗಿಳಿದ ಪೊಲೀಸರಿಗೆ ಕೀರ್ತಿ ಕೊಲೆಯಾದ ವಿಷಯ ತಿಳಿಯುತ್ತದೆ. ಇದರ ಜಾಡು ಹಿಡಿದು ಹೊರಟ ಪೊಲೀಸರಿಗೆ ಮೆಕ್ಯಾನಿಕ್ ಕೀರ್ತಿಯನ್ನು ಆಟೋ ಚಾಲಕ ಉಲ್ಲಾಸ್‌ ಎತ್ತಿಬಿಟ್ಟಿದ್ದಾನೆ ಎನ್ನುವುದು ಪತ್ತೆಯಾಗಿದೆ.

ಕೊಲೆ ಮಾಡಿದ ಬಳಿಕ ಮನುಷ್ಯತ್ವ ಮರೆತ ಕ್ರೂರಿಯೊಬ್ಬ ನಾವು ಹೊಡೆದಿದ್ದೇವೆ. ನಾವು ಇವನನ್ನ ಸಾಯಿಸಿದ್ದೇವೆ ಎಂದು ವಿಕೃತ ಆನಂದಪಟ್ಟಿದ್ದಾರೆ. ಇನ್ನು ಮತ್ತೊಂದು ವೀಡಿಯೋದಲ್ಲಿ ʻಹೇಯ್ ನಿಂತ್ಕೊಳ್ರೋ ನಾವು ದೊಡ್ಡದಾಗಿ ಬೆಳೆದು, ನಾವೂ ದೊಡ್ಡವರಾದ್ವಿ…ʼ ಎಂದು ಹೇಳುತ್ತಾ ಕೊಲೆಯನ್ನು ಸಂಭ್ರಮಿಸಿದ್ದಾರೆ. ಗಾಂಜಾ ಅಮಲಿನಲ್ಲಿ ಪುಂಡರ ರಾಕ್ಷಸೀ ಕೃತ್ಯ ಎಸಗಿದ್ದಾಗಿ ತಿಳಿದುಬಂದಿದೆ. ಹೀಗಾಗಿ ಈ ಹತ್ಯೆ ವಿಡಿಯೋ ಹಾಸನದಾದ್ಯಂತ ವೈರಲ್ ಆಗಿದ್ದು, ಬೆಚ್ಚಿಬೀಳೀಸಿದೆ.

ವೀಡಿಯೋ ಮಾಡಿರುವ ಉಲ್ಲಾಸ್‌ ಆಟೋ ಚಾಲಕನಾಗಿರುವ ಈತ ಹಾಸನ ಜಿಲ್ಲೆ ಆಲೂರು ಮೂಲದವನು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಉಲ್ಲಾಸ್ ಹಾಗು ಕೀರ್ತಿ ಎಲ್ಲರೂ ಪರಿಚಿತರಾಗಿದ್ದು, ನಿನ್ನೆ ಕೂಡ ಒಟ್ಟಿಗೆ ಇದ್ದವರು ಒಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಬಳಿಕ ಏನಾಯ್ತೋ ಏನೋ ಜೊತೆಗೆ ಬಂಧವನನ್ನ ಬಡಿದು ಕೊಂದು ಶವದ ಎದುರು ವೀಡಿಯೋ ಮಾಡಿದ್ದಾರೆ. ಒಂದು ವಿಡಿಯೋದಲ್ಲಿ ಪಾತಕಿ ಉಲ್ಲಾಸ್ ತಾನೊಬ್ಬನೇ ಇದ್ದರೆ, ಇನ್ನೊಂದು ವೀಡಿಯೋದಲ್ಲಿ ಮತ್ತಿಬ್ಬರನ್ನು ತೋರಿಸಿದ್ದಾನೆ. ಜೊತೆಗೇ ತೆರಳಿದ್ದ ಯುವಕರ ಗುಂಪಿನ ನಡುವೆ ಗಲಾಟೆ ನಡೆದು ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ.

ಕೀರ್ತಿಯ ಶವ ಬಿಟ್ಟಗೌಡನಹಳ್ಳಿ ಬಳಿ ಪತ್ತೆಯಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅದಿಕಾರಿಗಳು, ಸೂಕೊ ಟೀಂ, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ತನಿಖೆ ನಡೆಸಿ ಪಾತಕಿ ಉಲ್ಲಾದ ಬಂಧನಕ್ಕೆ ಬಲೆ ಬೀಸಿದ್ದಾರೆ.

error: Content is protected !!