ಬೆಳೆ ವಿಮೆ ಪರಿಹಾರ ವ್ಯವಸ್ಥೆಯ ಸುಧಾರಣೆಗೆ ರೈತ ಮುಖಂಡರ ಆಗ್ರಹ

ಮಂಗಳೂರು : ಬೆಳೆ ವಿಮೆ ಪರಿಹಾರದಲ್ಲಿ ಹಲವಾರು ನ್ಯೂನತೆಗಳಿದ್ದು, ಅವುಗಳು ತಕ್ಷಣ ಪರಿಷ್ಕರಣೆಯಾಗಬೇಕೆಂದು ಎಂದು ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಎಸ್ ಸಿ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಆಗ್ರಹಿಸಿದ್ದಾರೆ.

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು, ವಿಮಾ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕ ನೇರವಾಗಿ ರೈತರ ಖಾತೆಗೆ ಪಾವತಿಸುವ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಬೇಕೆಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ತೋಟಗಾರಿಕಾಧಿಕಾರಿ ದರ್ಶನ್, ಕಳೆದ ವರ್ಷ 215 ಕೋಟಿ ರೂ. ಪ್ರಿಮಿಯಂ ಸಂಗ್ರಹವಾಗಿದೆ. 270 ಕೋಟಿ ರೂ. ಪಾವತಿಯಾಗಿದೆ. ಈ ವರ್ಷ 277 ಕೋಟಿ ಬೆಳೆ ವಿಮಾ ಕಂತು ಸಂಗ್ರಹಿಸಲಾಗಿದೆ. ಇದುವರೆಗೆ 169 ರೂ. ಕೋಟಿ ಪಾವತಿಯಾಗಿದೆ. ಬೆಳೆ ವಿಮಾ ಪಾವತಿ ಕಡಿಮೆಯಾಗಿರುವ ಕಾರಣ ಪರಿಷ್ಕರಿಸಲು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ , ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರುಗಳಾದ ಟಿ.ಜಿ.ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್.ಬಿ. ಜಯರಾಮ್ ರೈ, ಕೆ.ಜೈರಾಜ್ ಬಿ.ರೈ., ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಎಸ್.ಎನ್.ಮನ್ಮಥ, ಕುಶಲಪ್ಪ ಗೌಡ, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ‌, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್., ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ದರ್ಶನ್, ಉಡುಪಿ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ನಿಧೀಶ್, ಟಾಟಾ ಎಐಜಿ ಜನರಲ್ ಇನ್ಸೂರೆನ್ಸ್ ಕಂಪನಿಯ ಹಿರಿಯ ಪ್ರಬಂಧಕ ಶುಭಂ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೋಟ್ಟು ಸ್ವಾಗತಿಸಿದರು.

error: Content is protected !!