ಬೆಂಗಳೂರು: ಮಂಗಳೂರು ಮೂಲದ ಶಿಲ್ಪಾ ಶೆಟ್ಟಿಯ ಬೆಂಗಳೂರು ನಗರದಲ್ಲಿರುವ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾ ವಿರುದ್ಧ 60 ಕೋಟಿ ವಂಚನೆ ಪ್ರಕರಣ ಚಾಲ್ತಿಯಲ್ಲಿದೆ.

ಬೆಂಗಳೂರಿನ ಚರ್ಚ್ಸ್ಟ್ರೀಟ್ ಬಳಿಯಿರುವ ಬ್ಯಾಸ್ಟಿಯನ್ ಪಬ್ ಮೇಲೆ ಮುಬೈ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ. ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ.