ವಿದ್ಯಾರ್ಥಿಗಳಿಗೆ ಸಮಸ್ಯೆಗಳನ್ನು ಎದುರಿಸುವ ಶಿಕ್ಷಣ ಕಲಿಸಬೇಕಾಗಿದೆ: ಜಗನ್ನಾಥ ಶೆಟ್ಟಿ ಬಾಳ

ಮಧ್ಯ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಶಿಕ್ಷಣವನ್ನು ಕಲಿಯಬೇಕಾಗಿದೆ ಎಂದು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ನುಡಿದರು. ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮಧ್ಯ ಶಾಲೆಯು ಖಾಸಗಿ ಶಾಲೆಯನ್ನು ಮೀರಿಸುವ ರೀತಿ ಬಹಳಷ್ಟು ಅಭಿವೃದ್ಧಿ ಹೊಂದಿದೆ ಹಾಗೂ ಇತರ ಶಾಲೆಗಳಿಗೆ ಮಾದರಿಯಾಗಿದೆ. ಸರಕಾರ ಮಾಡುವ ಕೆಲಸಗಳನ್ನು ದಾನಿಗಳು ಮಾಡುತ್ತಿದ್ದಾರೆ ಮುಂದೆ ಈ ಶಾಲೆಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಬರಲಿ ಎಂದರು.

ವೇದಿಕೆಯಲ್ಲಿ ಸುರತ್ಕಲ್ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಮೇಶ್ ರಾವ್, ಉದ್ಯಮಿ ಗಿರೀಶ್ ಎಂ ಶೆಟ್ಟಿ ಕಟೀಲು, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಸುರತ್ಕಲ್ ಜೆಸಿಐ ಸಂಸ್ಥೆಯ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ರೈ, ಮಧ್ಯ ಕುಲ್ಲಂಗಾಲು ಚಾಮುಂಡೇಶ್ವರಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ, ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ರಾಜ್ ಮೋಹನ್ ರಾವ್, ಕಾರ್ಯದರ್ಶಿ ಸತೀಶ್ ಸದಾನಂದ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ,ಉಪಾಧ್ಯಕ್ಷ ಅನಿಲ್ ಸಾಲ್ಯಾನ್ ಸೂರಿಂಜೆ, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್, ಕೋಶಾಧಿಕಾರಿ ವಿಠಲ ಶೆಟ್ಟಿ , ಸದಸ್ಯರಾದ ಪ್ರಕಾಶ್ ಶೆಟ್ಟಿ ಕುಲ್ಲಂಗಾಲು, ಬಾಲಕೃಷ್ಣ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಕಾವ್ಯ, ಶಶಿಕಲಾ, ಕುಸುಮಾಕರ ಶೆಟ್ಟಿ, ದಿನೇಶ್ ಕುಲ್ಲಂಗಾಲು, ಹರೀಶ್ ಭಂಡಾರಿ,ಸುದೀರ್ ಭಟ್, ಪರಮೇಶ್ವರ್, ಸವಿತಾ ಕುಲಾಲ್, ಕೇಶವ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ದೇವಾಡಿಗ, ರಿತೇಶ್ ಶೆಟ್ಟಿ ಮಧ್ಯ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ ವಹಿಸಿದ್ದರು ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಧ್ಯ ಸ್ವಾಗತಿಸಿ ಶಾಲೆಯ ಮುಖ್ಯ ಶಿಕ್ಷಕಿ ಜೇನ್ ಡಿಸೋಜಾ ಧನ್ಯವಾದ ಸಮರ್ಪಿಸಿ ಸಹ ಶಿಕ್ಷಕಿ ಶೈಲಾ ಕಾರ್ಯಕ್ರಮ ನಿರೂಪಿಸಿದರು.

error: Content is protected !!