ಚಿಕ್ಕಮಗಳೂರು: ಸಿಗರೇಟ್ ವಿಚಾರಕ್ಕೆ ಕುಡಿದ ಮತ್ತಿನಲ್ಲಿ ಬಾರ್ನಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಏಕಾಏಕಿ ಓರ್ವನಿಗೆ ಚಾಕು ಇರಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಶಕ್ತಿನಗರದಲ್ಲಿ ನಡೆದಿದೆ. ಗಲಾಟೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮೂಗ್ತಿಹಳ್ಳಿ ಗ್ರಾಮದ ಅನಿಲ್ ಕುಮಾರ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಬಾರ್ ಒಳಗಿಂದ ಚಾಕು ತಂದ ಆರೋಪಿಯು ಇರಿದು ಎಸ್ಕೇಪ್ ಆಗಿದ್ದರು.
ಗಂಭೀರವಾಗಿ ಗಾಯಗೊಂಡ ಅನಿಲ್ ಗೆ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಾಕು ಇರಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.