ಮನೆ ದರೋಡೆ ಯತ್ನಿಸಿ, ತಳ್ಳಾಟ ನಡೆಸಿ ಪರಾರಿಯಾಗಿದ್ದ ದಂಪತಿ ಬಂಧನ

ಪುತ್ತೂರು: ಮನೆ ದರೋಡೆಗೆ ಯತ್ನಿಸಿ, ಮನೆ ಮಾಲಿಕ ನಿವೃತ್ತ ಪ್ರಾಂಶುಪಾಲ ಹಾಗೂ ಇವರ ಪತ್ನಿಗೆ ಬೆದರಿಕೆ ಹಾಕಿ ತಳ್ಳಾಟ ನಡೆಸಿ ಪರಾರಿಯಾಗಿದ್ದ ಮಾಸ್ಕ್‌ ಹಾಕಿ ಬಂದಿದ್ದ ದಂಪತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು, ಪೊಲೀಸರು ತನಿಖೆ ನಡೆಸಿ ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯ ನಿವಾಸಿ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ ವಶಕ್ಕೆ ಪಡೆದಿದ್ದಾರೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದಾಗಿನ ಪೊಲೀಸರು ತಿಳಿಸಿದ್ದಾರೆ.

ಎ.ವಿ ನಾರಾಯಣ (84)ನಿವೃತ್ತ ಪ್ರಾಂಶುಪಾಲರಾಗಿದ್ದು, ಡಿ. 17 ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ ಮನೆ ಹಿಂಬಾಗಿಲಿನಿಂದ ನುಗ್ಗಿದ್ದಾರೆ. ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ನಾರಾಯಣ ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ಈ ವೇಳೆ ನಡೆದ ತಳ್ಳಾಟ ನಡೆದಿದೆ. ಈ ವೇಳೆ ಪ್ರಾಂಶುಪಾಲರ ಪತ್ನಿಗೆ ಗಾಯವಾಗಿದ್ದು, ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿದ್ದರು. ಆದರೆ ಮನೆಯಲ್ಲಿದ್ದ ಯಾವುದೇ ಸೊತ್ತುಗಳು ಕಳ್ಳತನವಾಗಿರಲಿಲ್ಲ ಎಂಬುದಾಗಿ ದೂರು ನೀಡಿದ್ದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿತ್ತು.

error: Content is protected !!