ಪೆರುವಾಯಿಯಲ್ಲಿ ನಾಲ್ಕು ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ

ಬಂಟ್ವಾಳ: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ನಡೆದ ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ದಿನಾಂಕ 18-11-2025 ರಂದು ಪೆರುವಾಯಿ ಗ್ರಾಮದ ನಿವಾಸಿಗಳಾದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಹುಲ್ಲು ಮೇಯಲು ಹೋಗಿದ್ದ ವೇಳೆ ಕಳ್ಳತನವಾಗಿರುವ ಬಗ್ಗೆ ಗಣೇಶ ರೈ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 169/2025 ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು ದಿನಾಂಕ 08-01-2026 ರಂದು ಆರೋಪಿಯಾದ ಝುಲ್ಫಾನ್ ಮಾಲಿಕ್ (30), ಕೋಡಿ, ಉಳ್ಳಾಲ್ ಗ್ರಾಮ ಹಾಗೂ ತಾಲೂಕು, ಮಂಗಳೂರು ನಿವಾಸಿಯನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

error: Content is protected !!