ಮದ್ಯದ ಅಮಲಿನಲ್ಲಿ ಕ್ರಿಮಿನಾಶಕ ಕುಡಿದು ಓರ್ವ ಸಾ*ವು

ಯಾದಗಿರಿ: ಮದ್ಯಪಾನದ ನಶೆಯಲ್ಲಿ ಕ್ರಿಮಿನಾಶಕ ಕುಡಿದು ಓರ್ವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.

 

ಕೊಂಡಾಪುರದ ನಿವಾಸಿ ಮುಕ್ತುಂ ಪಟೇಲ್‌ (43) ಮೃತ ವ್ಯಕ್ತಿ.

ಮುಕ್ತುಂ ಅವರು ಎಂದಿನಂತೆ ಮದ್ಯಪಾನ ಮಾಡಿ ಮನೆಗೆ ಬಂದಿದ್ದರು. ಊಟ ಮಾಡಲು ನಿರಾಕರಿಸಿದ್ದು, ಬಾಯಿಯಿಂದ ನೊರೆ ಬಂದು ಕ್ರಿಮಿನಾಶಕ ವಾಸನೆಯೂ ಬಂತು. ತಕ್ಷಣವೇ ಸೈದಾಪುರದ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದರು.

ಚಿಕಿತ್ಸೆಗೆ ಸ್ಪಂದಿಸದೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸೈದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!