ದ್ವೇಷ ಭಾಷಣ ಆರೋಪಿಸಿ ‌ʻಬಂಧುತ್ವ ವೇದಿಕೆʼ ದೂರು: ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಮತ್ತೆ ಕೇಸ್

ಪುತ್ತೂರು: ದ್ವೇಷ ಭಾಷಣ ಆರೋಪಿಪಿಸಿ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಹಾಗೂ ಇದನ್ನು ಪ್ರಸಾರ ಮಾಡಿ ಯೂಟ್ಯೂಬ್‌ ಚಾನೆಲ್‌ ಒಂದರ ಮೇಲೆ ಕೇಸ್‌ ದಾಖಲಾಗಿದೆ. ಈ ಬಾರಿ ಕರ್ನಾಟಕ ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಪುತ್ತೂರು ನಗರ ಠಾಣೆಗೆ ದೂರು ನೀಡಿದೆ.


ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಈ ದೂರು ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಕಲ್ಲಡ ಪ್ರಭಾಕರ ಭಟ್ ವಿರುದ್ಧ ಹಾಗೂ ಭಾಷಣವನ್ನು ಪ್ರಸಾರ ಮಾಡಿದ ವಿಕಸನ ಟಿವಿ ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಪುತ್ತೂರು ಠಾಣೆಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!