KSRTC ಬಸ್ ಬೈಕ್‌ಗೆ ಡಿಕ್ಕಿ: ಮಹಿಳೆ ಸಾವು, ಇಬ್ಬರಿಗೆ ಗಾಯ


ಮೈಸೂರು: ಬೈಕ್‌ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ನಡೆದಿದೆ.

ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ಮಹಿಳೆ.

ಮೃತ ಮಹಿಳೆ ಅಶ್ವಿನಿ ಅವರ ಪತಿ ಜೀವನ್ ಹಾಗೂ ಮಗು ಗಾಯಗೊಂಡಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೀವನ್ ಬೈಕಿನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಪಿರಿಯಾಪಟ್ಟಣ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ‌

ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!