ಮೂಲ್ಕಿ: ಇಲ್ಲಿನ ಕೊಕ್ಕರಕಲ್ ಬಳಿಯ ಹಾಲಿನ ಸೊಸೈಟಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.

ಚಿತ್ರಪುವಿನ ಮರ್ಕಂಜ ನಿವಾಸಿ ವನಜ ಪುರುಷೋತ್ತಮ ಪೂಜಾರಿ (59) ಮೃತ ಮಹಿಳೆ.
ವನಜಾ ಅವರು ಜಸಿಂತಾ ಮಚಾದೊ ಅವರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಡಿಕ್ಕಿ ಹೊಡೆದಿದ್ದು, ಅಪಘಾತದ ಪರಿಣಾಮ, ವನಜಾ ದೂರ ಎಸೆಯಲ್ಪಟ್ಟರು ಮತ್ತು ಗಂಭೀರ ಗಾಯಗಳಾಗಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಜಸಿಂತಾ ಮಚಾದೊ ಅವರಿಗೆ ಗಾಯಗಳಾಗಿ ಪ್ರಾಣಾಪಯಾದಿಂದ ಪಾರಾಗಿದ್ದಾರೆ.

ಕಾರು ಮಹಿಳೆಗೆ ಡಿಕ್ಕಿ ಹೊಡೆದ ನಂತರ, ರಸ್ತೆಬದಿಯ ಕಬ್ಬಿಣದ ಸುರಕ್ಷತಾ ಬ್ಯಾರಿಕೇಡ್ಗೆ ಕಾರು ಡಿಕ್ಕಿ ಹೊಡೆದು ನಿಂತಿರುವುದಾಗಿ ಹೇಳಲಾಗುತ್ತಿದೆ.

ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್, ಮೂಲ್ಕಿ ಪೊಲೀಸ್ ಸಿಬ್ಬಂದಿ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.